Advertisement
ಹವಾಮಾನ

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

Share

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್‌ ಎಲರ್ಟ್‌ ಸೇರಿದಂತೆ ವಿವಿಧ ಬಗೆಯ ಎಚ್ಚರಿಕೆಗಳು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಹಾಗಿದ್ದರೆ ಮಳೆಯಾಗದೇ ಇರಲು ಕಾರಣವೇನು..? ಹವಾಮಾನ ಇಲಾಖೆ, ವೆದರ್‌ ಮಾಹಿತಿ ಪ್ರಕಾರ ಕರಾವಳಿ, ಮಲೆನಾಡು ಭಾಗಕ್ಕೆ ಮೋಡಗಳ ಚಲನೆ ಇತ್ತು. ಎಲ್ಲವೂ ನಿರೀಕ್ಷೆ ಇತ್ತು. ಕೊನೆಯ ಕ್ಷಣದಲ್ಲಿ ಮಳೆ ಮಾತ್ರಾ ಬರಲಿಲ್ಲ..!. ಈ ಬಗ್ಗೆ ಹವಾಮಾನ ವಿಶ್ಲೇಷಕ ಸಾಯಿಶೇಖರ್‌ ಕರಿಕಳ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

ಐಎಂಡಿ ಮಾಹಿತಿ ಪ್ರಕಾರ ಹಾಗೂ ಉಪಗ್ರಹದ ಮಾಹಿತಿ ಪ್ರಕಾರ ಶನಿವಾರದಿಂದ ಉತ್ತಮ ಮಳೆ ಕರಾವಳಿ, ಮಲೆನಾಡು ಭಾಗದಲ್ಲಿ ಇರಬೇಕಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಗಾಲದ ಈ ಅವಧಿಯಲ್ಲಿ ಸಾಮಾನ್ಯವಾಗಿ ಉತ್ತಮವಾದ ಮಳೆ ನಿರೀಕ್ಷೆಯಂತೆಯೇ ಆಗುತ್ತದೆ. ಆದರೆ ಈಚೆಗೆ ಒಂದೆರಡು ವರ್ಷಗಳಿಂದ ಹವಾಮಾನದಲ್ಲಿ ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುತ್ತಿದೆ. ಈ ಬಾರಿಯೂ ಅದೇ ರೀತಿಯ ಸಂದರ್ಭ ಎದುರಾಗಿದೆ. ಸಾಯಿಶೇಖರ್‌ ಅವರು ಹೇಳುವ ಪ್ರಕಾರ, ಮೋಡಗಳ ಚಲನೆ ಉಪಗ್ರಹದಲ್ಲಿ ತೋರಿಸಿದಂತೆಯೇ ಇತ್ತು. ಆದರೆ ಈಗಲೂ ಸಮುದ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಹೇಳಬಹುದು, ಮೋಡಗಳು ಸಮುದ್ರದಿಂದ ಮುಂದೆ ಬಂದಿಲ್ಲ, ಇದಕ್ಕೆ ಗಾಳಿಯ ಕೊರತೆ ಕಾರಣವಿದೆ. ಉತ್ತಮ ಗಾಳಿ ಬೀಸಿದರೆ ಮೋಡದ ಚಲನೆಯಾಗು ಮಳೆಯಾಗಬೇಕಿತ್ತು. ಆದರೆ ಗಾಳಿಯ ಒತ್ತಡ ಕಡಿಮೆ ಇರಲು ಕಾರಣವೇನು? ಈ ಬಗ್ಗೆ ತಜ್ಞರು ವಿಶ್ಲೇಷಣೆ ಮಾಡಬೇಕಿದೆ, ವಿಜ್ಞಾನಿಗಳು ಈ ಬಗ್ಗೆ ತಿಳಿಸಬೇಕಿದೆ ಎನ್ನುತ್ತಾರೆ ಸಾಯಿಶೇಖರ್.…….ಮುಂದೆ ಓದಿ…..

ಈಗ ಉತ್ತರ ಭಾರತದಲ್ಲಿ ಬಿಸಿಗಾಳಿಯ ವಾತಾವರಣ ಇದೆ. ಹೀಗಾಗಿ ಗಾಳಿಯ ಒತ್ತಡ ಸಹಜವಾಗಿಯೇ ಕಡಿಮೆಯಾಗುವ ಸಾಧ್ಯತೆ ಉದೆ. ಈ ಕಾರಣದಿಂದಲೂ ಈಗ ಮಳೆಯ ಸೂಚನೆ ಇದ್ದರೂ ಗಾಳಿಯ ಒತ್ತಡ ಕಡಿಮೆಯಾಗಿರುವ ಸಾಧ್ಯತೆ ಇದೆ. ಹಾಗೆಂದು ಇದು ಅಧಿಕೃತವಾಗಿ ನಾವು ಹೇಳಲು ಬರುವುದಿಲ್ಲ, ತಜ್ಞರ ಅಧ್ಯಯನದ ಮೂಲಕವೇ ಸರಿಯಾದ ಮಾಹಿತಿ ಸಿಗಬಹುದು.

ಇಲಾಖೆಗಳ ಪ್ರಕಾರ ಈ ಬಾರಿ ಉತ್ತಮ ಮಳೆಯಾಗಬೇಕಿತ್ತು. ಇದುವರೆಗೂಈ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದಕ್ಕೆ ಕಾರಣ ಏನು..? ಎಂಬುದರ ಮಾಹಿತಿ ಲಭ್ಯವಾದರೆ ರೈತರು ಕೂಡಾ ಮುಂಜಾಗ್ರತಾ ಕ್ರಮಗಳೊಂದಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

1 hour ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

13 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

13 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

1 day ago