Advertisement
MIRROR FOCUS

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

Share

ಇಂದು ಇಡೀ ಪ್ರಪಂಚದಲ್ಲಿ ಹವಾಮಾನ ಬದಲಾವಣೆ ಬಹುದೊಡ್ಡ ಸವಾಲಾಗಿದೆ. ಭಾರತದಲ್ಲಿ ಕೃಷಿ ಬೆಳವಣಿಗೆಯ ಮೇಲೆ ಹವಾಮಾನ ಬದಲಾವಣೆ ಗಂಭೀರ ಪರಿಣಾಮ ಬೀರಿದರೆ  ವಿವಿಧ ದೇಶದಲ್ಲಿ ಬೇರೆ ಬೇರೆ ಸವಾಲುಗಳು ಹವಾಮಾನದ ಕಾರಣದಿಂದ ಇದೆ. ಬಾಂಗ್ಲಾದೇಶಕ್ಕೆ ಚಂಡಮಾರುತ ಸವಾಲಾಗಿ ಪರಿಣಮಿಸಲಿದೆ. ಮುಂದಿನ ದಿನಗಳಲ್ಲಿ ಚಂಡಮಾರುತಗಳು 10 ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿ ಹೇಳಿದೆ.…..ಮುಂದೆ ಓದಿ….

ಹವಾಮಾನ ಬದಲಾವಣೆಯ ಕಾರಣದಿಂದ ಬಾಂಗ್ಲಾದೇಶದಲ್ಲಿ ಚಂಡಮಾರುತದ ಸೃಷ್ಟಿ ಹಾಗೂ ಚಂಡಮಾರುತದ ಹೊಡೆತ ಈಗಿನ ಸ್ಥಿತಿಗಿಂತ  10 ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಒನ್ ಅರ್ಥ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದಲ್ಲಿ ತಿಳಿಸಲಾಗಿದೆ. ಪ್ರತಿ 100 ವರ್ಷಗಳಿಗೊಮ್ಮೆ ಸಂಭವಿಸುತ್ತಿದ್ದ ಭೀಕರ ಚಂಡಮಾರುತಗಳು ಮುಂದೆ ಪ್ರತಿ 10 ವರ್ಷಗಳಿಗೊಮ್ಮೆ  ಬಾಂಗ್ಲಾದೇಶವನ್ನು ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನ ವರದಿ ಹೇಳಿದೆ.

ಈ ಅಧ್ಯಯನದ ಪ್ರಕಾರ, ತೀವ್ರವಾದ ಚಂಡಮಾರುತಗಳು ಇನ್ನೂ ಹೆಚ್ಚಾಗಿ ಸಂಭವಿಸಬಹುದು ಎಂದು ಹೇಳಿದೆ. ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವುದರಿಂದ ಬಿರುಗಾಳಿ ಮತ್ತು ಪ್ರವಾಹದ ಪರಿಣಾಮಗಳು ಹೆಚ್ಚಾಗಬಹುದು ಎಂದು ವಿಜ್ಞಾನಿಗಳ ಹೇಳಿದ್ದಾರೆ. ಇದೇ ರೀತಿ ಮುಂದುವರಿದರೆ
ಸುಮಾರು ಎಂಟು ಮಿಲಿಯನ್ ಜನರಿಗೆ ನೆಲೆಯಾಗಿರುವ ಬಾಂಗ್ಲಾದೇಶದ ತಗ್ಗು ಪ್ರದೇಶದ ಕರಾವಳಿಯು,  ಚಂಡಮಾರುತ ಮತ್ತು ಚಂಡಮಾರುತದ ಹಾನಿಗಳಿಗೆ ಗುರಿಯಾಗುವ ಸಾಧ್ಯತೆ ಇದೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಆರು ಚಂಡಮಾರುತಗಳು ಸುಮಾರು 140,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿವೆ.

ಕೃಷಿ-ಗ್ರಾಮೀಣ-ಪರಿಸರ ಸುದ್ದಿಗೆ ಆದ್ಯತೆ ನೀಡುವ ನಮ್ಮ www.theruralmirror.com ಡಿಜಿಟಲ್‌ ಮಾಧ್ಯಮದ WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಭೂಮಿಯು ಬಿಸಿಯಾದಂತೆಯೇ ಚಂಡಮಾರುತಗಳ ಸಂಖ್ಯೆಯೂ ಹೆಚ್ಚಾಗುತ್ತಾ ಸಾಗುತ್ತದೆ. ಸಾಮಾನ್ಯವಾಗಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಮಾನ್ಸೂನ್ ಸಂಭವಿಸಿದರೆ, ಬಂಗಾಳಕೊಲ್ಲಿಯಲ್ಲಿ ಉಷ್ಣವಲಯದ ಚಂಡಮಾರುತಗಳು ಸಾಮಾನ್ಯವಾಗಿ ಮೇ ಮತ್ತು ಜೂನ್ ನಡುವಿನ ಮಾನ್ಸೂನ್ ಪೂರ್ವ ಮತ್ತು ಅಕ್ಟೋಬರ್-ನವೆಂಬರ್ ನಡುವಿನ ಮಾನ್ಸೂನ್ ನಂತರದ ಅವಧಿಯಲ್ಲಿ ಗರಿಷ್ಠ ಮಟ್ಟವನ್ನು ತಲುಪಬಹುದು ಎಂದು ಅಂದಾಜಿಸಲಾಗಿದೆ. ಹವಾಮಾನ ಬದಲಾವಣೆಯು ಮುಂಗಾರು ವಿಳಂಬಕ್ಕೆ ಹಾಗೂ ಮುಂದೂಡುವುದಕ್ಕೂ ಕಾರಣವಾಗುತ್ತದೆ. ಹೀಗಾಗಿ ಮಳೆಯ ಪರಿವರ್ತನೆ, ಮಳೆಯ ಕಾಲದ ಪರಿವರ್ತನೆ ಕೂಡಾ ಸಾಧ್ಯವಿದೆ. ಹೀಗಾಗಿ ಹವಾಮಾನ ಬದಲಾವಣೆಯು ವಿವಿಧ ರೀತಿಯಲ್ಲಿ ಪರಿಣಾಮವನ್ನು ನೀಡುತ್ತಿದೆ. ಈಚೆಗಿನ ದಿನಗಳಲ್ಲಿ ಈ ಬದಲಾವಣೆಗಳು ಹೆಚ್ಚಾಗುತ್ತಿರುವುದು ಭವಿಷ್ಯದಲ್ಲಿ ಯೋಚಿಸಬೇಕಾದ ವಿಷಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

23 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

23 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

23 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

24 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago