Advertisement
MIRROR FOCUS

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

Share

ಇಂದು ಇಡೀ ಪ್ರಪಂಚದಲ್ಲಿ ಹವಾಮಾನ ಬದಲಾವಣೆ ಬಹುದೊಡ್ಡ ಸವಾಲಾಗಿದೆ. ಭಾರತದಲ್ಲಿ ಕೃಷಿ ಬೆಳವಣಿಗೆಯ ಮೇಲೆ ಹವಾಮಾನ ಬದಲಾವಣೆ ಗಂಭೀರ ಪರಿಣಾಮ ಬೀರಿದರೆ  ವಿವಿಧ ದೇಶದಲ್ಲಿ ಬೇರೆ ಬೇರೆ ಸವಾಲುಗಳು ಹವಾಮಾನದ ಕಾರಣದಿಂದ ಇದೆ. ಬಾಂಗ್ಲಾದೇಶಕ್ಕೆ ಚಂಡಮಾರುತ ಸವಾಲಾಗಿ ಪರಿಣಮಿಸಲಿದೆ. ಮುಂದಿನ ದಿನಗಳಲ್ಲಿ ಚಂಡಮಾರುತಗಳು 10 ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿ ಹೇಳಿದೆ.…..ಮುಂದೆ ಓದಿ….

ಹವಾಮಾನ ಬದಲಾವಣೆಯ ಕಾರಣದಿಂದ ಬಾಂಗ್ಲಾದೇಶದಲ್ಲಿ ಚಂಡಮಾರುತದ ಸೃಷ್ಟಿ ಹಾಗೂ ಚಂಡಮಾರುತದ ಹೊಡೆತ ಈಗಿನ ಸ್ಥಿತಿಗಿಂತ  10 ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಒನ್ ಅರ್ಥ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದಲ್ಲಿ ತಿಳಿಸಲಾಗಿದೆ. ಪ್ರತಿ 100 ವರ್ಷಗಳಿಗೊಮ್ಮೆ ಸಂಭವಿಸುತ್ತಿದ್ದ ಭೀಕರ ಚಂಡಮಾರುತಗಳು ಮುಂದೆ ಪ್ರತಿ 10 ವರ್ಷಗಳಿಗೊಮ್ಮೆ  ಬಾಂಗ್ಲಾದೇಶವನ್ನು ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನ ವರದಿ ಹೇಳಿದೆ.

ಈ ಅಧ್ಯಯನದ ಪ್ರಕಾರ, ತೀವ್ರವಾದ ಚಂಡಮಾರುತಗಳು ಇನ್ನೂ ಹೆಚ್ಚಾಗಿ ಸಂಭವಿಸಬಹುದು ಎಂದು ಹೇಳಿದೆ. ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವುದರಿಂದ ಬಿರುಗಾಳಿ ಮತ್ತು ಪ್ರವಾಹದ ಪರಿಣಾಮಗಳು ಹೆಚ್ಚಾಗಬಹುದು ಎಂದು ವಿಜ್ಞಾನಿಗಳ ಹೇಳಿದ್ದಾರೆ. ಇದೇ ರೀತಿ ಮುಂದುವರಿದರೆ
ಸುಮಾರು ಎಂಟು ಮಿಲಿಯನ್ ಜನರಿಗೆ ನೆಲೆಯಾಗಿರುವ ಬಾಂಗ್ಲಾದೇಶದ ತಗ್ಗು ಪ್ರದೇಶದ ಕರಾವಳಿಯು,  ಚಂಡಮಾರುತ ಮತ್ತು ಚಂಡಮಾರುತದ ಹಾನಿಗಳಿಗೆ ಗುರಿಯಾಗುವ ಸಾಧ್ಯತೆ ಇದೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಆರು ಚಂಡಮಾರುತಗಳು ಸುಮಾರು 140,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿವೆ.

ಕೃಷಿ-ಗ್ರಾಮೀಣ-ಪರಿಸರ ಸುದ್ದಿಗೆ ಆದ್ಯತೆ ನೀಡುವ ನಮ್ಮ www.theruralmirror.com ಡಿಜಿಟಲ್‌ ಮಾಧ್ಯಮದ WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಭೂಮಿಯು ಬಿಸಿಯಾದಂತೆಯೇ ಚಂಡಮಾರುತಗಳ ಸಂಖ್ಯೆಯೂ ಹೆಚ್ಚಾಗುತ್ತಾ ಸಾಗುತ್ತದೆ. ಸಾಮಾನ್ಯವಾಗಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಮಾನ್ಸೂನ್ ಸಂಭವಿಸಿದರೆ, ಬಂಗಾಳಕೊಲ್ಲಿಯಲ್ಲಿ ಉಷ್ಣವಲಯದ ಚಂಡಮಾರುತಗಳು ಸಾಮಾನ್ಯವಾಗಿ ಮೇ ಮತ್ತು ಜೂನ್ ನಡುವಿನ ಮಾನ್ಸೂನ್ ಪೂರ್ವ ಮತ್ತು ಅಕ್ಟೋಬರ್-ನವೆಂಬರ್ ನಡುವಿನ ಮಾನ್ಸೂನ್ ನಂತರದ ಅವಧಿಯಲ್ಲಿ ಗರಿಷ್ಠ ಮಟ್ಟವನ್ನು ತಲುಪಬಹುದು ಎಂದು ಅಂದಾಜಿಸಲಾಗಿದೆ. ಹವಾಮಾನ ಬದಲಾವಣೆಯು ಮುಂಗಾರು ವಿಳಂಬಕ್ಕೆ ಹಾಗೂ ಮುಂದೂಡುವುದಕ್ಕೂ ಕಾರಣವಾಗುತ್ತದೆ. ಹೀಗಾಗಿ ಮಳೆಯ ಪರಿವರ್ತನೆ, ಮಳೆಯ ಕಾಲದ ಪರಿವರ್ತನೆ ಕೂಡಾ ಸಾಧ್ಯವಿದೆ. ಹೀಗಾಗಿ ಹವಾಮಾನ ಬದಲಾವಣೆಯು ವಿವಿಧ ರೀತಿಯಲ್ಲಿ ಪರಿಣಾಮವನ್ನು ನೀಡುತ್ತಿದೆ. ಈಚೆಗಿನ ದಿನಗಳಲ್ಲಿ ಈ ಬದಲಾವಣೆಗಳು ಹೆಚ್ಚಾಗುತ್ತಿರುವುದು ಭವಿಷ್ಯದಲ್ಲಿ ಯೋಚಿಸಬೇಕಾದ ವಿಷಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

4 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

12 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

12 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

14 hours ago