MIRROR FOCUS

ಮಲೆನಾಡಿನಲ್ಲಾಗಿರುವ ಹವಾಮಾನ ಬದಲಾವಣೆ | ಕೃಷಿಯ ಮೇಲಿನ ಪರಿಣಾಮಗಳು ಏನು ? | ಅಡಿಕೆ ಬೆಳೆಯ ರೋಗಕ್ಕೆ ಕಾರಣಗಳು ಏನು..? | ಚಿಂತನ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲವು ವರ್ಷಗಳಿಂದ ದೇಶದಾದ್ಯಂತ ಹವಾಮಾನ ಬದಲಾವಣೆಯ ಪರಿಣಾಮಗಳು ಕಂಡುಬರುತ್ತಿದೆ. ಇದರಿಂದ ಕೃಷಿ, ಪರಿಸರ  ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಹಲವು ಆಯಾಮಗಳಿಂದ ಸಮಸ್ಯೆಗಳಾಗುತ್ತಿದೆ. ಈಗ ಹವಾಮಾನ ಬದಲಾವಣೆಯಿಂದ ಮಲೆನಾಡು ಭಾಗಗಳಲ್ಲಿ ಆಗಿರುವ ವಿಶೇಷ ಬದಲಾವಣೆಗಳು ಹಾಗೂ ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಲು ಆರಂಭವಾಗಿದೆ. ಇದಕ್ಕಾಗಿ ಆರಂಭ ಹಂತದ ಚಿಂತನಾ ಸಭೆ ನಡೆಯಿತು. 

Advertisement
Advertisement

ತಾಪಮಾನ ಏರಿಕೆ, ಇದರಿಂದಾಗಿ ಹವಾಮಾನ ಬದಲಾವಣೆ. ಈ ಕಾರಣದಿಂದ ಹವಾಮಾನ ಏರುಪೇರು. ಮಳೆಯ ಪರಿಸ್ಥಿತಿ ಬದಲಾವಣೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ, ಮಳೆಯಾಗಬೇಕಾದ ಕಾಲದಲ್ಲಿ ಬಿಸಿಲು. ಇದೆಲ್ಲಾ ಕೃಷಿಯ ಮೇಲೆ, ಗ್ರಾಮೀಣ ಭಾಗದ ಹಲವು ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದೆ. ಈಚೆಗೆ ಕೆಲವು ಸಮಯಗಳಿಂದ ಮಳೆಯ ಪ್ಯಾಟರ್ನ್‌ ಕೂಡಾ ಬದಲಾಗಿದೆ. ಹೀಗಾಗಿ ಬಹುವಾರ್ಷಿಕ ಬೆಳೆಗಳಾದ ಅಡಿಕೆ, ರಬ್ಬರ್‌, ಕಾಫಿ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಇದಕ್ಕೆ ಕಾರಣ ಹಾಗೂ ಮುಂದೆ ಅಳವಡಿಸಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧ್ಯಯನ ಹಾಗೂ ಎಚ್ಚರಿಕೆಗಳ ಬಗ್ಗೆ ಚರ್ಚಿಸಲು ಕೃಷಿಕರ ಸಂವಾದ -ಚಿಂತನೆ ಆರಂಭವಾಗಿದೆ.

ಸುಳ್ಯ ತಾಲೂಕಿನ ಬಾಳಿಲದಲ್ಲಿ  ಕಳೆದ 48 ವರ್ಷಗಳಿಂದ ಮಳೆ ದಾಖಲೆ ಮಾಡುತ್ತಿರುವ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಮಳೆ ದಾಖಲೆಗಳನ್ನು ಆಧಾರವಾಗಿರಿಸಿಕೊಂಡು ಚರ್ಚೆ ಆರಂಭಿಸಲಾಗಿದೆ.  ಚಿಂತನಾ ಸಭೆಯಲ್ಲಿ ಐಬಿಬಿಎನ್‌ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಪಣೀಶ್ ಕೃಷ್ಣ ಮತ್ತು ಕೃಷಿ ಗ್ರಾಮೀಣ ಅಭಿವೃದ್ಧಿ ವಿಶ್ಲೇಷಕ ಕೆ.ಪಿ.ಸುರೇಶ್ ಕಂಜರ್ಪಣೆ,  ಕೃಷಿಕರಾದ ವಿನಯಚಂದ್ರ ಕಿಲಂಗೋಡಿ, ಸುರೇಶ್ಚಂದ್ರ ಕಲ್ಮಡ್ಕ, ಪ್ರಸನ್ನ ಎಣ್ಮೂರು, ಸಾಯಿಶೇಖರ್‌ ಕರಿಕಳ , ಮಹೇಶ್‌ ಪುಚ್ಚಪ್ಪಾಡಿ ಇದ್ದರು.

ಕಳೆದ ಸುಮಾರು 50 ವರ್ಷಗಳಿಂದ ಮಳೆಯ ಪ್ಯಾಟರ್ನ್‌ನಲ್ಲಿ ಬದಲಾವಣೆ ಹಾಗೂ ಮಳೆಯ ಬದಲಾವಣೆಗೆ ಕಾರಣಗಳು ಏನು ಎಂಬುದರ ಬಗ್ಗೆ ಚರ್ಚಿಸಲಾಯಿತು. ಇದರಿಂದಾಗಿ ಕೃಷಿಯ ಮೇಲೆ ಆಗುತ್ತಿರುವ ಪರಿಣಾಮಗಳು, ಬಹುವಾರ್ಷಿಕ ಬೆಳೆಯಾದ ಅಡಿಕೆಯ ಮೇಲೆ ಆಗುತ್ತಿರುವ ಪರಿಣಾಮಗಳು, ಅಡಿಕೆಯ ಮೇಲೆ ಬರುತ್ತಿರುವ ಈಚೆಗಿನ ರೋಗಗಳಾದ ಸಿಂಗಾರ ಒಣಗುವಿಕೆ, ಎಲೆಚುಕ್ಕಿ ರೋಗದ ಕಾರಣ ಹಾಗೂ ಅಡಿಕೆ ಒಡೆದು ಬೀಳುವುದು ಇತ್ಯಾದಿಗಳು, ರಬ್ಬರ್‌ ಕೃಷಿಯ ಮೇಲೆ ಆಗುತ್ತಿರುವ ಪರಿಣಾಮಗಳು, ಕಾಫಿ ಬೆಳೆಯಲ್ಲಿ ಆಗುವ ಬದಲಾವಣೆಗಳು, ಇಳುವರಿ ಕೊರತೆ ಇದಕ್ಕೆಲ್ಲಾ ಪ್ರಮುಖವಾದ ಕಾರಣಗಳು ಹವಾಮಾನದ ಬದಲಾವಣೆ. ಇದಕ್ಕಾಗಿ ಮುಂದೆ ಏನು ತಕ್ಷಣದ ಕ್ರಮಗಳು ಕೈಗೊಳ್ಳಬಹುದು ಹಾಗೂ ದೀರ್ಘಾವಧಿಯಾಗಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಚರ್ಚಿಸಲಾಯಿತು.

Advertisement

ಇದಕ್ಕಾಗಿ ಮುಂದೆ ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡು ಭಾಗದ ಕೃಷಿಕರ ಅಭಿಪ್ರಾಯವೂ ಅಗತ್ಯವಿದೆ. ಈ ನೆಲೆಯಲ್ಲಿ  ಕೃಷಿಯನ್ನು ಉಳಿಸುವ, ಗ್ರಾಮೀಣ , ಪರಿಸರ ಬದಲಾವಣೆಯನ್ನು ತಡೆಯುವ ಪ್ರಯತ್ನ ನಡೆಯಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

8 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

9 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

9 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

15 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

16 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

23 hours ago