Advertisement
MIRROR FOCUS

ಮಲೆನಾಡಿನಲ್ಲಾಗಿರುವ ಹವಾಮಾನ ಬದಲಾವಣೆ | ಕೃಷಿಯ ಮೇಲಿನ ಪರಿಣಾಮಗಳು ಏನು ? | ಅಡಿಕೆ ಬೆಳೆಯ ರೋಗಕ್ಕೆ ಕಾರಣಗಳು ಏನು..? | ಚಿಂತನ ಆರಂಭ |

Share

ಕಳೆದ ಕೆಲವು ವರ್ಷಗಳಿಂದ ದೇಶದಾದ್ಯಂತ ಹವಾಮಾನ ಬದಲಾವಣೆಯ ಪರಿಣಾಮಗಳು ಕಂಡುಬರುತ್ತಿದೆ. ಇದರಿಂದ ಕೃಷಿ, ಪರಿಸರ  ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಹಲವು ಆಯಾಮಗಳಿಂದ ಸಮಸ್ಯೆಗಳಾಗುತ್ತಿದೆ. ಈಗ ಹವಾಮಾನ ಬದಲಾವಣೆಯಿಂದ ಮಲೆನಾಡು ಭಾಗಗಳಲ್ಲಿ ಆಗಿರುವ ವಿಶೇಷ ಬದಲಾವಣೆಗಳು ಹಾಗೂ ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಲು ಆರಂಭವಾಗಿದೆ. ಇದಕ್ಕಾಗಿ ಆರಂಭ ಹಂತದ ಚಿಂತನಾ ಸಭೆ ನಡೆಯಿತು. 

Advertisement
Advertisement

ತಾಪಮಾನ ಏರಿಕೆ, ಇದರಿಂದಾಗಿ ಹವಾಮಾನ ಬದಲಾವಣೆ. ಈ ಕಾರಣದಿಂದ ಹವಾಮಾನ ಏರುಪೇರು. ಮಳೆಯ ಪರಿಸ್ಥಿತಿ ಬದಲಾವಣೆ. ಚಳಿ ಇರಬೇಕಾದ ಕಾಲದಲ್ಲಿ ಮಳೆ, ಮಳೆಯಾಗಬೇಕಾದ ಕಾಲದಲ್ಲಿ ಬಿಸಿಲು. ಇದೆಲ್ಲಾ ಕೃಷಿಯ ಮೇಲೆ, ಗ್ರಾಮೀಣ ಭಾಗದ ಹಲವು ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದೆ. ಈಚೆಗೆ ಕೆಲವು ಸಮಯಗಳಿಂದ ಮಳೆಯ ಪ್ಯಾಟರ್ನ್‌ ಕೂಡಾ ಬದಲಾಗಿದೆ. ಹೀಗಾಗಿ ಬಹುವಾರ್ಷಿಕ ಬೆಳೆಗಳಾದ ಅಡಿಕೆ, ರಬ್ಬರ್‌, ಕಾಫಿ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಇದಕ್ಕೆ ಕಾರಣ ಹಾಗೂ ಮುಂದೆ ಅಳವಡಿಸಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧ್ಯಯನ ಹಾಗೂ ಎಚ್ಚರಿಕೆಗಳ ಬಗ್ಗೆ ಚರ್ಚಿಸಲು ಕೃಷಿಕರ ಸಂವಾದ -ಚಿಂತನೆ ಆರಂಭವಾಗಿದೆ.

ಸುಳ್ಯ ತಾಲೂಕಿನ ಬಾಳಿಲದಲ್ಲಿ  ಕಳೆದ 48 ವರ್ಷಗಳಿಂದ ಮಳೆ ದಾಖಲೆ ಮಾಡುತ್ತಿರುವ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಮಳೆ ದಾಖಲೆಗಳನ್ನು ಆಧಾರವಾಗಿರಿಸಿಕೊಂಡು ಚರ್ಚೆ ಆರಂಭಿಸಲಾಗಿದೆ.  ಚಿಂತನಾ ಸಭೆಯಲ್ಲಿ ಐಬಿಬಿಎನ್‌ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಪಣೀಶ್ ಕೃಷ್ಣ ಮತ್ತು ಕೃಷಿ ಗ್ರಾಮೀಣ ಅಭಿವೃದ್ಧಿ ವಿಶ್ಲೇಷಕ ಕೆ.ಪಿ.ಸುರೇಶ್ ಕಂಜರ್ಪಣೆ,  ಕೃಷಿಕರಾದ ವಿನಯಚಂದ್ರ ಕಿಲಂಗೋಡಿ, ಸುರೇಶ್ಚಂದ್ರ ಕಲ್ಮಡ್ಕ, ಪ್ರಸನ್ನ ಎಣ್ಮೂರು, ಸಾಯಿಶೇಖರ್‌ ಕರಿಕಳ , ಮಹೇಶ್‌ ಪುಚ್ಚಪ್ಪಾಡಿ ಇದ್ದರು.

ಕಳೆದ ಸುಮಾರು 50 ವರ್ಷಗಳಿಂದ ಮಳೆಯ ಪ್ಯಾಟರ್ನ್‌ನಲ್ಲಿ ಬದಲಾವಣೆ ಹಾಗೂ ಮಳೆಯ ಬದಲಾವಣೆಗೆ ಕಾರಣಗಳು ಏನು ಎಂಬುದರ ಬಗ್ಗೆ ಚರ್ಚಿಸಲಾಯಿತು. ಇದರಿಂದಾಗಿ ಕೃಷಿಯ ಮೇಲೆ ಆಗುತ್ತಿರುವ ಪರಿಣಾಮಗಳು, ಬಹುವಾರ್ಷಿಕ ಬೆಳೆಯಾದ ಅಡಿಕೆಯ ಮೇಲೆ ಆಗುತ್ತಿರುವ ಪರಿಣಾಮಗಳು, ಅಡಿಕೆಯ ಮೇಲೆ ಬರುತ್ತಿರುವ ಈಚೆಗಿನ ರೋಗಗಳಾದ ಸಿಂಗಾರ ಒಣಗುವಿಕೆ, ಎಲೆಚುಕ್ಕಿ ರೋಗದ ಕಾರಣ ಹಾಗೂ ಅಡಿಕೆ ಒಡೆದು ಬೀಳುವುದು ಇತ್ಯಾದಿಗಳು, ರಬ್ಬರ್‌ ಕೃಷಿಯ ಮೇಲೆ ಆಗುತ್ತಿರುವ ಪರಿಣಾಮಗಳು, ಕಾಫಿ ಬೆಳೆಯಲ್ಲಿ ಆಗುವ ಬದಲಾವಣೆಗಳು, ಇಳುವರಿ ಕೊರತೆ ಇದಕ್ಕೆಲ್ಲಾ ಪ್ರಮುಖವಾದ ಕಾರಣಗಳು ಹವಾಮಾನದ ಬದಲಾವಣೆ. ಇದಕ್ಕಾಗಿ ಮುಂದೆ ಏನು ತಕ್ಷಣದ ಕ್ರಮಗಳು ಕೈಗೊಳ್ಳಬಹುದು ಹಾಗೂ ದೀರ್ಘಾವಧಿಯಾಗಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಚರ್ಚಿಸಲಾಯಿತು.

ಇದಕ್ಕಾಗಿ ಮುಂದೆ ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡು ಭಾಗದ ಕೃಷಿಕರ ಅಭಿಪ್ರಾಯವೂ ಅಗತ್ಯವಿದೆ. ಈ ನೆಲೆಯಲ್ಲಿ  ಕೃಷಿಯನ್ನು ಉಳಿಸುವ, ಗ್ರಾಮೀಣ , ಪರಿಸರ ಬದಲಾವಣೆಯನ್ನು ತಡೆಯುವ ಪ್ರಯತ್ನ ನಡೆಯಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

24 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago