Advertisement
MIRROR FOCUS

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

Share

ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಭಣವಾಗುತ್ತಿದೆ ಎಂದು  ಆಫ್ರಿಕನ್ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

Advertisement
Advertisement

ಆಫ್ರಿಕಾ ಖಂಡವನ್ನು ಗಮನದಲ್ಲಿರಿಸಿ ವಿಜ್ಞಾನಿಗಳು ಈ ಬಗ್ಗೆ ಎಚ್ಚರಿಸಿದ್ದಾರೆ, ಆದರೆ ವಿಶ್ವದಾದ್ಯಂತ ಇಂದು ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿದೆ ಎಂದು ಅಧ್ಯಯನವು ಹೇಳಿದೆ. ಈಗ  ಆಫ್ರಿಕಾ ಖಂಡವು ಸೊಳ್ಳೆಗಳಿಂದ ಹರಡುವ ಸೋಂಕುಗಳ ಹೆಚ್ಚಳವನ್ನು ಎದುರಿಸುತ್ತಿದೆ, ಮಲೇರಿಯಾ ಮತ್ತು ಡೆಂಗ್ಯು ಜ್ವರ ಸೇರಿದಂತೆ, ಸಾರ್ವಜನಿಕರ ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮವನ್ನು ಉಂಟುಮಾಡುತ್ತಿದೆ ಎಂದು ವಿಜ್ಞಾನಿಗಳು ಸೋಮವಾರ ವರ್ಚುವಲ್ ಫೋರಂನಲ್ಲಿ ಎಚ್ಚರಿಸಿದ್ದಾರೆ.

Advertisement

ಹವಾಮಾನ ಬದಲಾವಣೆಯು ಆಫ್ರಿಕಾದಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರ ಹರಡುವಿಕೆಗೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ, ಇದು ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು  ಅಂತರಾಷ್ಟ್ರೀಯ ಆರೋಗ್ಯ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈಕೆಲ್ ಚಾರ್ಲ್ಸ್ ಹೇಳಿದ್ದಾರೆ.

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ಹೆಚ್ಚು ಸವಾಲಾಗುತ್ತಿವೆ ಎಂದು ಚಾರ್ಲ್ಸ್ ಹೇಳಿದ್ದಾರೆ.

Advertisement

ಹವಾಮಾನ ಕಾರಣದಿಂದ ಭವಿಷ್ಯದಲ್ಲಿ ಮಲೇರಿಯಾ, ಡೆಂಗ್ಯು ಜ್ವರ, ಕಾಲರಾ ಮತ್ತು ಜಿಕಾ ವೈರಸ್‌ನಂತಹ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಫೋರಂ ಅಭಿಪ್ರಾಯಪಟ್ಟಿದೆ.

African scientists have cautioned that mosquito-borne diseases are increasing as a result of climate change.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

7 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

7 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

8 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

8 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

9 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

16 hours ago