Advertisement
MIRROR FOCUS

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

Share

ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಭಣವಾಗುತ್ತಿದೆ ಎಂದು  ಆಫ್ರಿಕನ್ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement

ಆಫ್ರಿಕಾ ಖಂಡವನ್ನು ಗಮನದಲ್ಲಿರಿಸಿ ವಿಜ್ಞಾನಿಗಳು ಈ ಬಗ್ಗೆ ಎಚ್ಚರಿಸಿದ್ದಾರೆ, ಆದರೆ ವಿಶ್ವದಾದ್ಯಂತ ಇಂದು ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿದೆ ಎಂದು ಅಧ್ಯಯನವು ಹೇಳಿದೆ. ಈಗ  ಆಫ್ರಿಕಾ ಖಂಡವು ಸೊಳ್ಳೆಗಳಿಂದ ಹರಡುವ ಸೋಂಕುಗಳ ಹೆಚ್ಚಳವನ್ನು ಎದುರಿಸುತ್ತಿದೆ, ಮಲೇರಿಯಾ ಮತ್ತು ಡೆಂಗ್ಯು ಜ್ವರ ಸೇರಿದಂತೆ, ಸಾರ್ವಜನಿಕರ ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮವನ್ನು ಉಂಟುಮಾಡುತ್ತಿದೆ ಎಂದು ವಿಜ್ಞಾನಿಗಳು ಸೋಮವಾರ ವರ್ಚುವಲ್ ಫೋರಂನಲ್ಲಿ ಎಚ್ಚರಿಸಿದ್ದಾರೆ.

Advertisement

ಹವಾಮಾನ ಬದಲಾವಣೆಯು ಆಫ್ರಿಕಾದಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರ ಹರಡುವಿಕೆಗೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ, ಇದು ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು  ಅಂತರಾಷ್ಟ್ರೀಯ ಆರೋಗ್ಯ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈಕೆಲ್ ಚಾರ್ಲ್ಸ್ ಹೇಳಿದ್ದಾರೆ.

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ಹೆಚ್ಚು ಸವಾಲಾಗುತ್ತಿವೆ ಎಂದು ಚಾರ್ಲ್ಸ್ ಹೇಳಿದ್ದಾರೆ.

Advertisement

ಹವಾಮಾನ ಕಾರಣದಿಂದ ಭವಿಷ್ಯದಲ್ಲಿ ಮಲೇರಿಯಾ, ಡೆಂಗ್ಯು ಜ್ವರ, ಕಾಲರಾ ಮತ್ತು ಜಿಕಾ ವೈರಸ್‌ನಂತಹ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಫೋರಂ ಅಭಿಪ್ರಾಯಪಟ್ಟಿದೆ.

African scientists have cautioned that mosquito-borne diseases are increasing as a result of climate change.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago