Advertisement
MIRROR FOCUS

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

Share

ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಭಣವಾಗುತ್ತಿದೆ ಎಂದು  ಆಫ್ರಿಕನ್ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಆಫ್ರಿಕಾ ಖಂಡವನ್ನು ಗಮನದಲ್ಲಿರಿಸಿ ವಿಜ್ಞಾನಿಗಳು ಈ ಬಗ್ಗೆ ಎಚ್ಚರಿಸಿದ್ದಾರೆ, ಆದರೆ ವಿಶ್ವದಾದ್ಯಂತ ಇಂದು ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿದೆ ಎಂದು ಅಧ್ಯಯನವು ಹೇಳಿದೆ. ಈಗ  ಆಫ್ರಿಕಾ ಖಂಡವು ಸೊಳ್ಳೆಗಳಿಂದ ಹರಡುವ ಸೋಂಕುಗಳ ಹೆಚ್ಚಳವನ್ನು ಎದುರಿಸುತ್ತಿದೆ, ಮಲೇರಿಯಾ ಮತ್ತು ಡೆಂಗ್ಯು ಜ್ವರ ಸೇರಿದಂತೆ, ಸಾರ್ವಜನಿಕರ ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮವನ್ನು ಉಂಟುಮಾಡುತ್ತಿದೆ ಎಂದು ವಿಜ್ಞಾನಿಗಳು ಸೋಮವಾರ ವರ್ಚುವಲ್ ಫೋರಂನಲ್ಲಿ ಎಚ್ಚರಿಸಿದ್ದಾರೆ.

ಹವಾಮಾನ ಬದಲಾವಣೆಯು ಆಫ್ರಿಕಾದಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರ ಹರಡುವಿಕೆಗೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ, ಇದು ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು  ಅಂತರಾಷ್ಟ್ರೀಯ ಆರೋಗ್ಯ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈಕೆಲ್ ಚಾರ್ಲ್ಸ್ ಹೇಳಿದ್ದಾರೆ.

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ಹೆಚ್ಚು ಸವಾಲಾಗುತ್ತಿವೆ ಎಂದು ಚಾರ್ಲ್ಸ್ ಹೇಳಿದ್ದಾರೆ.

ಹವಾಮಾನ ಕಾರಣದಿಂದ ಭವಿಷ್ಯದಲ್ಲಿ ಮಲೇರಿಯಾ, ಡೆಂಗ್ಯು ಜ್ವರ, ಕಾಲರಾ ಮತ್ತು ಜಿಕಾ ವೈರಸ್‌ನಂತಹ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಫೋರಂ ಅಭಿಪ್ರಾಯಪಟ್ಟಿದೆ.

African scientists have cautioned that mosquito-borne diseases are increasing as a result of climate change.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago