Advertisement
MIRROR FOCUS

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

Share

ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಭಣವಾಗುತ್ತಿದೆ ಎಂದು  ಆಫ್ರಿಕನ್ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಆಫ್ರಿಕಾ ಖಂಡವನ್ನು ಗಮನದಲ್ಲಿರಿಸಿ ವಿಜ್ಞಾನಿಗಳು ಈ ಬಗ್ಗೆ ಎಚ್ಚರಿಸಿದ್ದಾರೆ, ಆದರೆ ವಿಶ್ವದಾದ್ಯಂತ ಇಂದು ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿದೆ ಎಂದು ಅಧ್ಯಯನವು ಹೇಳಿದೆ. ಈಗ  ಆಫ್ರಿಕಾ ಖಂಡವು ಸೊಳ್ಳೆಗಳಿಂದ ಹರಡುವ ಸೋಂಕುಗಳ ಹೆಚ್ಚಳವನ್ನು ಎದುರಿಸುತ್ತಿದೆ, ಮಲೇರಿಯಾ ಮತ್ತು ಡೆಂಗ್ಯು ಜ್ವರ ಸೇರಿದಂತೆ, ಸಾರ್ವಜನಿಕರ ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮವನ್ನು ಉಂಟುಮಾಡುತ್ತಿದೆ ಎಂದು ವಿಜ್ಞಾನಿಗಳು ಸೋಮವಾರ ವರ್ಚುವಲ್ ಫೋರಂನಲ್ಲಿ ಎಚ್ಚರಿಸಿದ್ದಾರೆ.

ಹವಾಮಾನ ಬದಲಾವಣೆಯು ಆಫ್ರಿಕಾದಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರ ಹರಡುವಿಕೆಗೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ, ಇದು ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು  ಅಂತರಾಷ್ಟ್ರೀಯ ಆರೋಗ್ಯ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈಕೆಲ್ ಚಾರ್ಲ್ಸ್ ಹೇಳಿದ್ದಾರೆ.

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ಹೆಚ್ಚು ಸವಾಲಾಗುತ್ತಿವೆ ಎಂದು ಚಾರ್ಲ್ಸ್ ಹೇಳಿದ್ದಾರೆ.

ಹವಾಮಾನ ಕಾರಣದಿಂದ ಭವಿಷ್ಯದಲ್ಲಿ ಮಲೇರಿಯಾ, ಡೆಂಗ್ಯು ಜ್ವರ, ಕಾಲರಾ ಮತ್ತು ಜಿಕಾ ವೈರಸ್‌ನಂತಹ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಫೋರಂ ಅಭಿಪ್ರಾಯಪಟ್ಟಿದೆ.

African scientists have cautioned that mosquito-borne diseases are increasing as a result of climate change.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago