Advertisement
MIRROR FOCUS

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

Share

ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಭಣವಾಗುತ್ತಿದೆ ಎಂದು  ಆಫ್ರಿಕನ್ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಆಫ್ರಿಕಾ ಖಂಡವನ್ನು ಗಮನದಲ್ಲಿರಿಸಿ ವಿಜ್ಞಾನಿಗಳು ಈ ಬಗ್ಗೆ ಎಚ್ಚರಿಸಿದ್ದಾರೆ, ಆದರೆ ವಿಶ್ವದಾದ್ಯಂತ ಇಂದು ಹವಾಮಾನ ಬದಲಾವಣೆಯ ಕಾರಣದಿಂದ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿದೆ ಎಂದು ಅಧ್ಯಯನವು ಹೇಳಿದೆ. ಈಗ  ಆಫ್ರಿಕಾ ಖಂಡವು ಸೊಳ್ಳೆಗಳಿಂದ ಹರಡುವ ಸೋಂಕುಗಳ ಹೆಚ್ಚಳವನ್ನು ಎದುರಿಸುತ್ತಿದೆ, ಮಲೇರಿಯಾ ಮತ್ತು ಡೆಂಗ್ಯು ಜ್ವರ ಸೇರಿದಂತೆ, ಸಾರ್ವಜನಿಕರ ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮವನ್ನು ಉಂಟುಮಾಡುತ್ತಿದೆ ಎಂದು ವಿಜ್ಞಾನಿಗಳು ಸೋಮವಾರ ವರ್ಚುವಲ್ ಫೋರಂನಲ್ಲಿ ಎಚ್ಚರಿಸಿದ್ದಾರೆ.

ಹವಾಮಾನ ಬದಲಾವಣೆಯು ಆಫ್ರಿಕಾದಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರ ಹರಡುವಿಕೆಗೆ ಕಾರಣವಾದ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ, ಇದು ಆರ್ಥಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು  ಅಂತರಾಷ್ಟ್ರೀಯ ಆರೋಗ್ಯ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈಕೆಲ್ ಚಾರ್ಲ್ಸ್ ಹೇಳಿದ್ದಾರೆ.

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ಹೆಚ್ಚು ಸವಾಲಾಗುತ್ತಿವೆ ಎಂದು ಚಾರ್ಲ್ಸ್ ಹೇಳಿದ್ದಾರೆ.

ಹವಾಮಾನ ಕಾರಣದಿಂದ ಭವಿಷ್ಯದಲ್ಲಿ ಮಲೇರಿಯಾ, ಡೆಂಗ್ಯು ಜ್ವರ, ಕಾಲರಾ ಮತ್ತು ಜಿಕಾ ವೈರಸ್‌ನಂತಹ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಫೋರಂ ಅಭಿಪ್ರಾಯಪಟ್ಟಿದೆ.

African scientists have cautioned that mosquito-borne diseases are increasing as a result of climate change.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

14 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

18 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago