The Rural Mirror ವಾರದ ವಿಶೇಷ

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಮಳೆ ದೂರವಾಗಿದೆ. ಎಲ್ಲೆಡೆಯೂ ಕುಡಿಯುವ ನೀರಿನ ಸಂಕಷ್ಟವಿದೆ. ಕೃಷಿಗೆ ನೀರಿಲ್ಲದೆ ಒಣಗುತ್ತಿದೆ. ತಾಪಮಾನ 40 ಡಿಗ್ರಿಗಿಂತ ಅಧಿಕವಾಗುತ್ತಿದೆ. ಇದೀಗ ಬಿಸಿ ಗಾಳಿಯ ತಲೆ ಬಿಸಿ ಶುರುವಾಗಿದೆ. ಗ್ರಾಮೀಣ ಭಾಗದಲ್ಲೂ ಉರಿಬಿಸಿಗೆ ತಡೆಯಲಾಗುತ್ತಿಲ್ಲ. ಬಯಲುಸೀಮೆಯಲ್ಲಂತೂ ಸಂಕಷ್ಟವೇ ಸಂಕಷ್ಟ. ನಗರದಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇದ್ದರೆ, ಕೃಷಿ ಭೂಮಿಯಲ್ಲಿ, ಗ್ರಾಮೀಣ ಭಾಗದಲ್ಲಿ ಸಂಕಷ್ಟ ಶುರುವಾಗಿದೆ. ಈಗ ಕೃಷಿ ಕಾರ್ಮಿಕರಿಗೆ, ಕೃಷಿಕರಿಗೆ , ಗ್ರಾಮೀಣ ಭಾಗದ ಜನರಿಗೆ ಸಂಕಷ್ಟ ಹೆಚ್ಚಾಗಿದೆ.

Advertisement

ಕೃಷಿ ಕಾರ್ಮಿಕರು ತಮ್ಮ ದೈನಂದಿನ ಆದಾಯಕ್ಕಾಗಿ ಕೆಲಸಕ್ಕೆ ಹೋಗಲೇಬೇಕಾದ ಅನಿವಾರ್ಯತೆ ಇದೆ. ಉಳಿದೆಲ್ಲಾ ಕೆಲಸಗಳಲ್ಲಿ ಸಮಯದ ಹೊಂದಾಣಿಕೆ ಮಾಡಿಕೊಳ್ಳಬಹುದಾದರೆ ಕೃಷಿಯಲ್ಲಿ ಸಾಧ್ಯವಿಲ್ಲ. ಕೆಲವು ಕೆಲಸಗಳು ಹಗಲು ವೇಳೆಯೇ ಮಾಡಿಕೊಳ್ಳಬೇಕಿದೆ. ಹೀಗಾಗಿ ನಿತ್ಯವೂ ಬಿಸಿಗಾಳಿಯ ವಿರುದ್ಧ ಹೋರಾಡುತ್ತಿದ್ದಾರೆ.  ಕಾರ್ಮಿಕರು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡು ಕನಿಷ್ಟ6-7 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದೆ.

ಎಂತ ಮಾಡುವುದು, ವಿಪರೀತ ಬಿಸಿಲು, ಸೆಖೆ. ಆದರೆ ಕೆಲಸ ಮಾಡಲೇಬೇಕಲ್ಲ. ನನಗೆ ವಾರಕ್ಕೆ ಒಂದಿಷ್ಟು ಹಣ ಬೇಕೇಬೇಕು. ಸಂಘಗಳಿಗೆ ಪಾವತಿ ಮಾಡಬೇಕು ಎನ್ನುತ್ತಾರೆ ಕೃಷಿ ಕಾರ್ಮಿಕ ವೀರಪ್ಪ
.

ಕರ್ನಾಟಕದಲ್ಲಿ ಇದುವರೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಹ ಸಮಸ್ಯೆ ಇದ್ದಿರಲಿಲ್ಲ. ಉತ್ತರ ಕರ್ನಾಟಕದ ಭಾಗದಲ್ಲಿ, ಬಯಲುಸೀಮೆಯಲ್ಲಿ ಬಿಸಿಲಿನ ತಾಪದ ಪರಿಣಾಮಗಳು ಇದ್ದವು. ಹೀಗಾಗಿ ಬೆಳಗ್ಗೆ 7 ಗಂಟೆಗೆ ಕೆಲಸಗಳು ಹೊಲದಲ್ಲಿ ಆರಂಭವಾಗಿ ಮಧ್ಯಾಹ್ನದ ಮೊದಲೇ ಮುಗಿಯುತ್ತಿದ್ದವು. ಇದೀಗ ಬೆಳಗ್ಗೆ 10 ಗಂಟೆಗೇ ತಾಪಮಾನ ಹೆಚ್ಚಾಗುತ್ತಿದೆ. ಕೆಲಸಕ್ಕೆ ಸಮಸ್ಯೆಯಾಗಿದೆ. ಈಗ ದಕ್ಷಿಣ ಕನ್ನದ ಜಿಲ್ಲೆಯಲ್ಲೂ ಅದೇ ಸಮಸ್ಯೆ ಇದೆ. ಬೆಳಗ್ಗೆ 10 ಗಂಟೆಗೇ ತಾಪಮಾನದ ಸಮಸ್ಯೆ ಆರಂಭವಾಗುತ್ತದೆ. 40 ಡಿಗ್ರಿಗಿಂತ ಅಧಿಕ ತಾಪಮಾನವಾಗುವ ಕಾರಣ ಯಾವುದೇ ಕೆಲಸ ಮಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಕೃಷಿ ಬೆಳವಣಿಗೆಯ ಮೇಲೆ ಹೊಡೆತ ಬಿದ್ದಿದೆ. ಕೆಲವು ಅನಿವಾರ್ಯತೆಗಳಿಂದ ಕಾರ್ಮಿಕರು ಕೆಲಸಕ್ಕೆ ಹೋಗಲೇಬೇಕಾದ ಸ್ಥಿತಿ ಇದೆ. ಹೀಗಾಗಿ ತಾಪಮಾನವನ್ನು ಸಹಿಸಿಕೊಳ್ಳಲೇಬೇಕಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲೂ ಇದೇ ಸಮಸ್ಯೆ ಇದೆ,ಕಳೆದ ಎರಡು ವಾರಗಳಲ್ಲಿ ಹಲವೆಡೆ 38 ರಿಂದ 41 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ತಮಿಳುನಾಡು ಬಿಸಿಗಾಳಿಯಿಂದ ತತ್ತರಿಸುತ್ತಿದೆ. 2011 ರ ಜನಗಣತಿಯ ಪ್ರಕಾರ, ತಮಿಳುನಾಡು ರಾಜ್ಯದಲ್ಲಿ 9.6 ಮಿಲಿಯನ್ ಕೃಷಿ ಕಾರ್ಮಿಕರಿದ್ದಾರೆ. ಅವರಿಗೆಲ್ಲಾ ಈಗ ಸಮಸ್ಯೆ. ಶಾಖವನ್ನು ತಡೆದುಕೊಳ್ಳಲು ಸಾಧ್ಯವಾಗದೆ ಇತ್ತೀಚೆಗೆ  ತಲೆತಿರುಗುವಿಕೆ ಮತ್ತು ವಿಪರೀತ ಸುಸ್ತು ಕಂಡುಬರುತ್ತಿದೆ.

ಇತ್ತೀಚಿನ ಮಾಹಿತಿಯಂತೆ, ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ ಪ್ರಕಾರ 70.9% ರಷ್ಟು ಜಾಗತಿಕ ಉದ್ಯೋಗಿಗಳು ಅತಿಯಾದ ಶಾಖಕ್ಕೆ ಒಳಗಾಗುತ್ತಾರೆ ಮತ್ತು ಕಾರ್ಮಿಕರ ಆರೋಗ್ಯದ ಮೇಲೆ ಇದರ ಪರಿಣಾಮಗಳನ್ನು ಬೀರುತ್ತಿದೆ.ಈಗ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭತ್ತದ ಕೃಷಿ, ಹತ್ತಿ ಕೃಷಿ, ಉದ್ದಿನ ಬೇಳೆ ಕೊಯ್ಲು ಮತ್ತು ಬಾಳೆ ಕೃಷಿಯು ಭರದಿಂದ ಸಾಗುತ್ತಿದೆ. ಈ ಎಲ್ಲಾ ಬೆಳೆ ಗ್ರಾಹಕರಿಗೆ ತಲುಪಲು ಬಿಸಿಗಾಳಿಯ ನಡುವೆ ಹೊಲದಲ್ಲಿ ಕೃಷಿ ಕಾರ್ಮಿಕರ ಅಗತ್ಯವಿದೆ.

ಗ್ರಾಮೀಣ ಭಾಗದಲ್ಲಿ ಹಲವು ಆರ್ಥಿಕ ಸಂಕಷ್ಟಗಳಿವೆ. ವಾರದ ಕೊನೆಗೆ ಸಂಘದ ಕಂತು ಪಾವತಿ ಮಾಡಲೇಬೇಕಿದೆ, ಅದರ ಜೊತೆಗೆ ವಾರದ ಖರ್ಚುಗಳೂ ಇವೆ. ಈ ವೆಚ್ಚ ನಿಭಾಯಿಸಲು ಕೃಷಿ ಕೆಲಸಕ್ಕೆ ಹೋಗಲೇಬೇಕಾದ ಅನೇಕ ಕುಟುಂಬಗಳು ಇವೆ. ತೀರಾ ವಿಪರೀತವಾದ ಸೆಖೆ, ತಾಪಮಾನ ಹಾಗೂ ಬಿಸಿಗಾಳಿಯ ಕಾರಣದಿಂದ ಕೆಲಸ ಮಾಡಲಾಗುತ್ತಿಲ್ಲ, ಇದು ಕೃಷಿಕನಿಗೂ ನಷ್ಟ, ಸಂಕಷ್ಟದ ಪರಿಸ್ಥಿತಿ. ಹೀಗಾಗಿ ಕೃಷಿ ಕಾರ್ಮಿಕನಿಗೂ ಕೃಷಿಕನಿಗೂ ಈಗ ವಿಪರೀತ ತಾಪಮಾನ ಸಮಸ್ಯೆ ತಂದೊಡ್ಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

4 minutes ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

19 minutes ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

7 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

14 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

14 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

14 hours ago