The Rural Mirror ವಾರದ ವಿಶೇಷ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ ಮಾತ್ರವಲ್ಲ ಮನುಷ್ಯನ ನಿದ್ರೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ನೇಚರ್‌ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.

Advertisement
Advertisement

ಈ ಅಧ್ಯಯನವು ಹಲವಾರು ದೇಶಗಳ 1,15,000 ಕ್ಕೂ ಹೆಚ್ಚು ಜನರನ್ನು ಎರಡು ವರ್ಷಗಳವರೆಗೆ ಗಮನಿಸಿದೆ ಹಾಗೂ ಡಾಟಾಗಳನ್ನು ಸಂಗ್ರಹಿಸಿದ ಆಧಾರದಲ್ಲಿ ಈ ಮಾಹಿತಿಯನ್ನು  ತಿಳಿಸಿದೆ. ಹಾಸಿಗೆಯ ಕೆಳಗೆ ನಿದ್ರೆಯ ಮಾನಿಟರ್‌ಗಳೊಂದಿಗೆ ಅವರ ನಿದ್ರೆಯ ಗುಣಮಟ್ಟವನ್ನು ಅಳೆಯಲಾಗಿತ್ತು. ನಂತರ ತಾಪಮಾನ ಮತ್ತು ನಿದ್ರೆಯ ನಡುವಿನ ಸಂಬಂಧವನ್ನು ಮೌಲ್ಯಮಾಪನ ಮಾಡಲು ಹವಾಮಾನದ ಡಾಟಾಗಳೊಂದಿಗೆ ಈ ಮಾಹಿತಿಯನ್ನು ತಾಳೆ ಮಾಡಿ ಅಧ್ಯಯನ ನಡೆಸಿದ ವರದಿಯಾಗಿದೆ.

26 ಡಿಗ್ರಿಯ ವಾತಾವರಣದಲ್ಲಿ 40 ರ ದಶಕಗಳ ಹಿಂದಿನ ದಿನಗಳಿಗೆ ಹೋಲಿಸಿದಾಗ, ನಿದ್ರೆಯ ಗುಣಮಟ್ಟ ಅಥವಾ  ನಿದ್ರೆಯ ಸಮಯ 40 ರಿಂದ 45% ಹೆಚ್ಚಳ ಅಂದು ಕಂಡುಬಂದಿದೆ. ಈಗಿನ ದಿನಗಳಲ್ಲಿ ಅತಿಯಾದ ಉಷ್ಣತೆಯು ನಿದ್ರೆಯನ್ನು ಕೆಡಿಸುವ ಮೂಲಕ ನಿದ್ರೆ ಮಾಡುವುದನ್ನು ಕಷ್ಟಕರವಾಗಿಸುತ್ತದೆ ಎಂದು ಅಧ್ಯಯನವು ಗಮನಿಸಿದೆ. ಹೆಚ್ಚಿನ ತಾಪಮಾನವು ರಾತ್ರಿಯ ಸಮಯದಲ್ಲಿ ದೇಹವು ತಣ್ಣಗಾಗುವ ಸಾಮರ್ಥ್ಯಕ್ಕೆ ಅಡ್ಡಿಪಡಿಸುತ್ತದೆ, ಇದು ನೈಸರ್ಗಿಕ ನಿದ್ರೆಯ ಚಕ್ರಕ್ಕೆ ಅಡ್ಡಿಪಡಿಸುತ್ತದೆ. ಇದರಿಂದ ಆಗಾಗ್ಗೆ ಎಚ್ಚರಗೊಳ್ಳುವಿಕೆ, ದೀರ್ಘವಾದ ನಿದ್ರೆ ಮತ್ತು ಉಸಿರಾಟದ ಅಸ್ಥಿರತೆಗೆ ಕಾರಣವಾಗುತ್ತದೆ, ಇದರ ಪರಿಣಾಮವಾಗಿ ಹೆಚ್ಚಿನ ಉಸಿರುಕಟ್ಟುವಿಕೆ ಘಟನೆಗಳು ನಡೆಯುತ್ತಿದೆ ಎಂದು ವರದಿ ಹೇಳಿದೆ.

ಹೀಗೇ ನಿದ್ರೆಯ ಸಮಸ್ಯೆ ಹಾಗೂ ಹವಾಮಾನ ಬದಲಾವಣೆಯು ಜಾಗತಿಕವಾಗಿ ಸುಮಾರು 1 ಬಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತಿದೆ ಮತ್ತು  80% ಜನರಿಗೆ ಈ ಬಗ್ಗೆ ತಿಳಿದಿಲ್ಲ , ಚಿಕಿತ್ಸೆಯೂ ಇಲ್ಲ. ಈ ಕಾರಣದಿಂದ ಇಂದು ಹೃದ್ರೋಗ, ಪಾರ್ಶ್ವವಾಯು, ಬುದ್ಧಿಮಾಂದ್ಯತೆ, ಮಧುಮೇಹ ಮತ್ತು ಖಿನ್ನತೆಯ ಅಪಾಯವನ್ನು ಹೆಚ್ಚಿಸಿದೆ ಎಂದು ಅಧ್ಯಯನ ವರದಿ ಹೇಳಿದೆ.

ಹೀಗಾಗಿ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಕೃಷಿಗೆ ಮಾತ್ರವಲ್ಲ ಪರಿಸರದ ಜೀವಿಗಳ ಮೇಲೂ ಪರಿಣಾಮ ಬೀರುವುದು  ಈಗಾಗಲೇ ವರದಿಯಾಗಿದೆ. ಇದೀಗ ಮನುಷ್ಯದ ಮೇಲೂ ಪರಿಣಾಮ ಬೀರುವುದು ಗಮನಕ್ಕೆ ಬರುತ್ತಿದೆ. ಇದೀಗ ಈ ಅಧ್ಯಯನ ವರದಿಯನ್ನೂ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

37 minutes ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

39 minutes ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

44 minutes ago

ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ

ಕೋಲಾರ– ಚಿಕ್ಕಬಳ್ಳಾಪುರ ಸೇರಿದಂತೆ ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎತ್ತಿನಹೊಳೆ…

50 minutes ago

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

6 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

7 hours ago