Advertisement
The Rural Mirror ವಾರದ ವಿಶೇಷ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

Share

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ ಮಾತ್ರವಲ್ಲ ಮನುಷ್ಯನ ನಿದ್ರೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ನೇಚರ್‌ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.

ಈ ಅಧ್ಯಯನವು ಹಲವಾರು ದೇಶಗಳ 1,15,000 ಕ್ಕೂ ಹೆಚ್ಚು ಜನರನ್ನು ಎರಡು ವರ್ಷಗಳವರೆಗೆ ಗಮನಿಸಿದೆ ಹಾಗೂ ಡಾಟಾಗಳನ್ನು ಸಂಗ್ರಹಿಸಿದ ಆಧಾರದಲ್ಲಿ ಈ ಮಾಹಿತಿಯನ್ನು  ತಿಳಿಸಿದೆ. ಹಾಸಿಗೆಯ ಕೆಳಗೆ ನಿದ್ರೆಯ ಮಾನಿಟರ್‌ಗಳೊಂದಿಗೆ ಅವರ ನಿದ್ರೆಯ ಗುಣಮಟ್ಟವನ್ನು ಅಳೆಯಲಾಗಿತ್ತು. ನಂತರ ತಾಪಮಾನ ಮತ್ತು ನಿದ್ರೆಯ ನಡುವಿನ ಸಂಬಂಧವನ್ನು ಮೌಲ್ಯಮಾಪನ ಮಾಡಲು ಹವಾಮಾನದ ಡಾಟಾಗಳೊಂದಿಗೆ ಈ ಮಾಹಿತಿಯನ್ನು ತಾಳೆ ಮಾಡಿ ಅಧ್ಯಯನ ನಡೆಸಿದ ವರದಿಯಾಗಿದೆ.

26 ಡಿಗ್ರಿಯ ವಾತಾವರಣದಲ್ಲಿ 40 ರ ದಶಕಗಳ ಹಿಂದಿನ ದಿನಗಳಿಗೆ ಹೋಲಿಸಿದಾಗ, ನಿದ್ರೆಯ ಗುಣಮಟ್ಟ ಅಥವಾ  ನಿದ್ರೆಯ ಸಮಯ 40 ರಿಂದ 45% ಹೆಚ್ಚಳ ಅಂದು ಕಂಡುಬಂದಿದೆ. ಈಗಿನ ದಿನಗಳಲ್ಲಿ ಅತಿಯಾದ ಉಷ್ಣತೆಯು ನಿದ್ರೆಯನ್ನು ಕೆಡಿಸುವ ಮೂಲಕ ನಿದ್ರೆ ಮಾಡುವುದನ್ನು ಕಷ್ಟಕರವಾಗಿಸುತ್ತದೆ ಎಂದು ಅಧ್ಯಯನವು ಗಮನಿಸಿದೆ. ಹೆಚ್ಚಿನ ತಾಪಮಾನವು ರಾತ್ರಿಯ ಸಮಯದಲ್ಲಿ ದೇಹವು ತಣ್ಣಗಾಗುವ ಸಾಮರ್ಥ್ಯಕ್ಕೆ ಅಡ್ಡಿಪಡಿಸುತ್ತದೆ, ಇದು ನೈಸರ್ಗಿಕ ನಿದ್ರೆಯ ಚಕ್ರಕ್ಕೆ ಅಡ್ಡಿಪಡಿಸುತ್ತದೆ. ಇದರಿಂದ ಆಗಾಗ್ಗೆ ಎಚ್ಚರಗೊಳ್ಳುವಿಕೆ, ದೀರ್ಘವಾದ ನಿದ್ರೆ ಮತ್ತು ಉಸಿರಾಟದ ಅಸ್ಥಿರತೆಗೆ ಕಾರಣವಾಗುತ್ತದೆ, ಇದರ ಪರಿಣಾಮವಾಗಿ ಹೆಚ್ಚಿನ ಉಸಿರುಕಟ್ಟುವಿಕೆ ಘಟನೆಗಳು ನಡೆಯುತ್ತಿದೆ ಎಂದು ವರದಿ ಹೇಳಿದೆ.

ಹೀಗೇ ನಿದ್ರೆಯ ಸಮಸ್ಯೆ ಹಾಗೂ ಹವಾಮಾನ ಬದಲಾವಣೆಯು ಜಾಗತಿಕವಾಗಿ ಸುಮಾರು 1 ಬಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತಿದೆ ಮತ್ತು  80% ಜನರಿಗೆ ಈ ಬಗ್ಗೆ ತಿಳಿದಿಲ್ಲ , ಚಿಕಿತ್ಸೆಯೂ ಇಲ್ಲ. ಈ ಕಾರಣದಿಂದ ಇಂದು ಹೃದ್ರೋಗ, ಪಾರ್ಶ್ವವಾಯು, ಬುದ್ಧಿಮಾಂದ್ಯತೆ, ಮಧುಮೇಹ ಮತ್ತು ಖಿನ್ನತೆಯ ಅಪಾಯವನ್ನು ಹೆಚ್ಚಿಸಿದೆ ಎಂದು ಅಧ್ಯಯನ ವರದಿ ಹೇಳಿದೆ.

ಹೀಗಾಗಿ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಕೃಷಿಗೆ ಮಾತ್ರವಲ್ಲ ಪರಿಸರದ ಜೀವಿಗಳ ಮೇಲೂ ಪರಿಣಾಮ ಬೀರುವುದು  ಈಗಾಗಲೇ ವರದಿಯಾಗಿದೆ. ಇದೀಗ ಮನುಷ್ಯದ ಮೇಲೂ ಪರಿಣಾಮ ಬೀರುವುದು ಗಮನಕ್ಕೆ ಬರುತ್ತಿದೆ. ಇದೀಗ ಈ ಅಧ್ಯಯನ ವರದಿಯನ್ನೂ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

50 minutes ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

1 hour ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

2 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

2 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

2 hours ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

11 hours ago