Advertisement
The Rural Mirror ವಾರದ ವಿಶೇಷ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

Share

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ ಮಾತ್ರವಲ್ಲ ಮನುಷ್ಯನ ನಿದ್ರೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ನೇಚರ್‌ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.

ಈ ಅಧ್ಯಯನವು ಹಲವಾರು ದೇಶಗಳ 1,15,000 ಕ್ಕೂ ಹೆಚ್ಚು ಜನರನ್ನು ಎರಡು ವರ್ಷಗಳವರೆಗೆ ಗಮನಿಸಿದೆ ಹಾಗೂ ಡಾಟಾಗಳನ್ನು ಸಂಗ್ರಹಿಸಿದ ಆಧಾರದಲ್ಲಿ ಈ ಮಾಹಿತಿಯನ್ನು  ತಿಳಿಸಿದೆ. ಹಾಸಿಗೆಯ ಕೆಳಗೆ ನಿದ್ರೆಯ ಮಾನಿಟರ್‌ಗಳೊಂದಿಗೆ ಅವರ ನಿದ್ರೆಯ ಗುಣಮಟ್ಟವನ್ನು ಅಳೆಯಲಾಗಿತ್ತು. ನಂತರ ತಾಪಮಾನ ಮತ್ತು ನಿದ್ರೆಯ ನಡುವಿನ ಸಂಬಂಧವನ್ನು ಮೌಲ್ಯಮಾಪನ ಮಾಡಲು ಹವಾಮಾನದ ಡಾಟಾಗಳೊಂದಿಗೆ ಈ ಮಾಹಿತಿಯನ್ನು ತಾಳೆ ಮಾಡಿ ಅಧ್ಯಯನ ನಡೆಸಿದ ವರದಿಯಾಗಿದೆ.

26 ಡಿಗ್ರಿಯ ವಾತಾವರಣದಲ್ಲಿ 40 ರ ದಶಕಗಳ ಹಿಂದಿನ ದಿನಗಳಿಗೆ ಹೋಲಿಸಿದಾಗ, ನಿದ್ರೆಯ ಗುಣಮಟ್ಟ ಅಥವಾ  ನಿದ್ರೆಯ ಸಮಯ 40 ರಿಂದ 45% ಹೆಚ್ಚಳ ಅಂದು ಕಂಡುಬಂದಿದೆ. ಈಗಿನ ದಿನಗಳಲ್ಲಿ ಅತಿಯಾದ ಉಷ್ಣತೆಯು ನಿದ್ರೆಯನ್ನು ಕೆಡಿಸುವ ಮೂಲಕ ನಿದ್ರೆ ಮಾಡುವುದನ್ನು ಕಷ್ಟಕರವಾಗಿಸುತ್ತದೆ ಎಂದು ಅಧ್ಯಯನವು ಗಮನಿಸಿದೆ. ಹೆಚ್ಚಿನ ತಾಪಮಾನವು ರಾತ್ರಿಯ ಸಮಯದಲ್ಲಿ ದೇಹವು ತಣ್ಣಗಾಗುವ ಸಾಮರ್ಥ್ಯಕ್ಕೆ ಅಡ್ಡಿಪಡಿಸುತ್ತದೆ, ಇದು ನೈಸರ್ಗಿಕ ನಿದ್ರೆಯ ಚಕ್ರಕ್ಕೆ ಅಡ್ಡಿಪಡಿಸುತ್ತದೆ. ಇದರಿಂದ ಆಗಾಗ್ಗೆ ಎಚ್ಚರಗೊಳ್ಳುವಿಕೆ, ದೀರ್ಘವಾದ ನಿದ್ರೆ ಮತ್ತು ಉಸಿರಾಟದ ಅಸ್ಥಿರತೆಗೆ ಕಾರಣವಾಗುತ್ತದೆ, ಇದರ ಪರಿಣಾಮವಾಗಿ ಹೆಚ್ಚಿನ ಉಸಿರುಕಟ್ಟುವಿಕೆ ಘಟನೆಗಳು ನಡೆಯುತ್ತಿದೆ ಎಂದು ವರದಿ ಹೇಳಿದೆ.

ಹೀಗೇ ನಿದ್ರೆಯ ಸಮಸ್ಯೆ ಹಾಗೂ ಹವಾಮಾನ ಬದಲಾವಣೆಯು ಜಾಗತಿಕವಾಗಿ ಸುಮಾರು 1 ಬಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತಿದೆ ಮತ್ತು  80% ಜನರಿಗೆ ಈ ಬಗ್ಗೆ ತಿಳಿದಿಲ್ಲ , ಚಿಕಿತ್ಸೆಯೂ ಇಲ್ಲ. ಈ ಕಾರಣದಿಂದ ಇಂದು ಹೃದ್ರೋಗ, ಪಾರ್ಶ್ವವಾಯು, ಬುದ್ಧಿಮಾಂದ್ಯತೆ, ಮಧುಮೇಹ ಮತ್ತು ಖಿನ್ನತೆಯ ಅಪಾಯವನ್ನು ಹೆಚ್ಚಿಸಿದೆ ಎಂದು ಅಧ್ಯಯನ ವರದಿ ಹೇಳಿದೆ.

ಹೀಗಾಗಿ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಕೃಷಿಗೆ ಮಾತ್ರವಲ್ಲ ಪರಿಸರದ ಜೀವಿಗಳ ಮೇಲೂ ಪರಿಣಾಮ ಬೀರುವುದು  ಈಗಾಗಲೇ ವರದಿಯಾಗಿದೆ. ಇದೀಗ ಮನುಷ್ಯದ ಮೇಲೂ ಪರಿಣಾಮ ಬೀರುವುದು ಗಮನಕ್ಕೆ ಬರುತ್ತಿದೆ. ಇದೀಗ ಈ ಅಧ್ಯಯನ ವರದಿಯನ್ನೂ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

22 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

22 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

22 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago