MIRROR FOCUS

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಬದಲಾವಣೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಸಂಬಂಧಿತ ಆರ್ಥಿಕ ಅಪಾಯಗಳನ್ನು ತಗ್ಗಿಸುವ ಬಗ್ಗೆ ತುರ್ತು ಕ್ರಮಗಳ ಅಗತ್ಯ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಹೇಳಿದ್ದಾರೆ.

Advertisement
Advertisement

ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದಲ್ಲಿ (ಎನ್‌ಯುಎಸ್) ಸೌತ್ ಏಷ್ಯನ್ ಸ್ಟಡೀಸ್ ಸಂಸ್ಥೆ (ಐಎಸ್‌ಎಎಸ್) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಹವಾಮಾನ ಬದಲಾವಣೆಯಿಂದ ಉಂಟಾಗುವ  ಅಪಾಯಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು, ಇತ್ತೀಚಿನ ಪ್ರಾಕೃತಿಕ ದುರಂತಗಳ ಬಗ್ಗೆ ಮಾತನಾಡಿದ ಅವರು ಸುಸ್ಥಿರ ಬೆಳವಣಿಗೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಪಾರದರ್ಶಕತೆ ಮತ್ತು ಪರಿಸರ ಸಾಮರ್ಥ್ಯ ನಿರ್ಮಾಣದ ಪ್ರಾಮುಖ್ಯತೆಯನ್ನು ಹೇಳಿದರು. 2024 ರಲ್ಲಿ ದಾಖಲೆಯ ತಾಪಮಾನ ಹಾಗೂ ಆ ಬಳಿಕದ ಹವಾಮಾನ, ಕೃಷಿ ಮತ್ತು ಪ್ರಾಕೃತಿಕ ಬದಲಾವಣೆಗಳ ಬಗ್ಗೆ ವಿಶ್ಲೇಷಿಸಿದ ಅವರು ಇಂತಹ ಹವಾಮಾನ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಹೀಗಾಗಿ ಆರ್ಥಿಕತೆ ಮತ್ತು ಹಣಕಾಸು ವಲಯವು ಹವಾಮಾನದ ಮೇಲೂ ಹೊಂದಿಕೊಂಡಿದೆ, ಈ ಪರಸ್ಪರ ಹೊಂದಾಣಿಕೆಯ ಕ್ರಿಯೆಯು ಭವಿಷ್ಯದಲ್ಲಿ ಹಣಕಾಸಿನ ಸ್ಥಿರತೆಯ ಅಪಾಯಗಳಿಗೆ ಕಾರಣವಾಗಬಹುದು. ಈಗಾಗಲೇ ಜಾಗತಿಕ ಆರ್ಥಿಕತೆಯ ಮೇಲೆ ಹವಾಮಾನ ಬದಲಾವಣೆಯ ಗಂಭೀರ ಪರಿಣಾಮ ಬೀರಿದೆ. ಹವಾಮಾನ ಬದಲಾವಣೆಯು ಹಣಕಾಸು ವ್ಯವಸ್ಥೆಗೆ ಪ್ರಮುಖ ಅಪಾಯವಾಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ರಾವ್ ಎಚ್ಚರಿಸಿದರು.

ಹೀಗಾಗಿ ಈಗಲೇ ಈ ಅಪಾಯಗಳ ಸರಿಯಾದ ರೀತಿಯಲ್ಲಿ ಗಮನಿಸಿಕೊಂಡು ಎಲ್ಲಾ ಕ್ಷೇತ್ರವನ್ನೂ ಸರಿಪಡಿಸಿಕೊಂಡು ಸಾಮರ್ಥ್ಯಗಳನ್ನು ಹೆಚ್ಚಿಸುವುದು ಅತ್ಯಗತ್ಯ ,  ಈ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ  ನಮ್ಮ ಮುಂದೆ ದೊಡ್ಡ ಜವಾಬ್ದಾರಿ ಇದೆ. ಭವಿಷ್ಯದ ಪೀಳಿಗೆಗೆ ಸುಸ್ಥಿರ ಬೆಳವಣಿಗೆ ಮತ್ತು ಪರಿಸರಕ್ಕಾಗಿ ನಾವು ಒಂದಾಗಿ ನಿರ್ಣಾಯಕ ಮಾರ್ಗಸೂಚಿಯನ್ನು ಒದಗಿಸಬೇಕಿದೆ ಎಂದು ಎಂದು ರಾವ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

2 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

2 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

3 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

17 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago