Advertisement
MIRROR FOCUS

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

Share

ಹವಾಮಾನ ಬದಲಾವಣೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಸಂಬಂಧಿತ ಆರ್ಥಿಕ ಅಪಾಯಗಳನ್ನು ತಗ್ಗಿಸುವ ಬಗ್ಗೆ ತುರ್ತು ಕ್ರಮಗಳ ಅಗತ್ಯ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಹೇಳಿದ್ದಾರೆ.

ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದಲ್ಲಿ (ಎನ್‌ಯುಎಸ್) ಸೌತ್ ಏಷ್ಯನ್ ಸ್ಟಡೀಸ್ ಸಂಸ್ಥೆ (ಐಎಸ್‌ಎಎಸ್) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಹವಾಮಾನ ಬದಲಾವಣೆಯಿಂದ ಉಂಟಾಗುವ  ಅಪಾಯಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು, ಇತ್ತೀಚಿನ ಪ್ರಾಕೃತಿಕ ದುರಂತಗಳ ಬಗ್ಗೆ ಮಾತನಾಡಿದ ಅವರು ಸುಸ್ಥಿರ ಬೆಳವಣಿಗೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಪಾರದರ್ಶಕತೆ ಮತ್ತು ಪರಿಸರ ಸಾಮರ್ಥ್ಯ ನಿರ್ಮಾಣದ ಪ್ರಾಮುಖ್ಯತೆಯನ್ನು ಹೇಳಿದರು. 2024 ರಲ್ಲಿ ದಾಖಲೆಯ ತಾಪಮಾನ ಹಾಗೂ ಆ ಬಳಿಕದ ಹವಾಮಾನ, ಕೃಷಿ ಮತ್ತು ಪ್ರಾಕೃತಿಕ ಬದಲಾವಣೆಗಳ ಬಗ್ಗೆ ವಿಶ್ಲೇಷಿಸಿದ ಅವರು ಇಂತಹ ಹವಾಮಾನ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಹೀಗಾಗಿ ಆರ್ಥಿಕತೆ ಮತ್ತು ಹಣಕಾಸು ವಲಯವು ಹವಾಮಾನದ ಮೇಲೂ ಹೊಂದಿಕೊಂಡಿದೆ, ಈ ಪರಸ್ಪರ ಹೊಂದಾಣಿಕೆಯ ಕ್ರಿಯೆಯು ಭವಿಷ್ಯದಲ್ಲಿ ಹಣಕಾಸಿನ ಸ್ಥಿರತೆಯ ಅಪಾಯಗಳಿಗೆ ಕಾರಣವಾಗಬಹುದು. ಈಗಾಗಲೇ ಜಾಗತಿಕ ಆರ್ಥಿಕತೆಯ ಮೇಲೆ ಹವಾಮಾನ ಬದಲಾವಣೆಯ ಗಂಭೀರ ಪರಿಣಾಮ ಬೀರಿದೆ. ಹವಾಮಾನ ಬದಲಾವಣೆಯು ಹಣಕಾಸು ವ್ಯವಸ್ಥೆಗೆ ಪ್ರಮುಖ ಅಪಾಯವಾಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ರಾವ್ ಎಚ್ಚರಿಸಿದರು.

ಹೀಗಾಗಿ ಈಗಲೇ ಈ ಅಪಾಯಗಳ ಸರಿಯಾದ ರೀತಿಯಲ್ಲಿ ಗಮನಿಸಿಕೊಂಡು ಎಲ್ಲಾ ಕ್ಷೇತ್ರವನ್ನೂ ಸರಿಪಡಿಸಿಕೊಂಡು ಸಾಮರ್ಥ್ಯಗಳನ್ನು ಹೆಚ್ಚಿಸುವುದು ಅತ್ಯಗತ್ಯ ,  ಈ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ  ನಮ್ಮ ಮುಂದೆ ದೊಡ್ಡ ಜವಾಬ್ದಾರಿ ಇದೆ. ಭವಿಷ್ಯದ ಪೀಳಿಗೆಗೆ ಸುಸ್ಥಿರ ಬೆಳವಣಿಗೆ ಮತ್ತು ಪರಿಸರಕ್ಕಾಗಿ ನಾವು ಒಂದಾಗಿ ನಿರ್ಣಾಯಕ ಮಾರ್ಗಸೂಚಿಯನ್ನು ಒದಗಿಸಬೇಕಿದೆ ಎಂದು ಎಂದು ರಾವ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

2 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

2 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

2 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

2 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

3 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

3 hours ago