Advertisement
MIRROR FOCUS

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

Share

ಹವಾಮಾನ ಬದಲಾವಣೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಸಂಬಂಧಿತ ಆರ್ಥಿಕ ಅಪಾಯಗಳನ್ನು ತಗ್ಗಿಸುವ ಬಗ್ಗೆ ತುರ್ತು ಕ್ರಮಗಳ ಅಗತ್ಯ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಹೇಳಿದ್ದಾರೆ.

ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದಲ್ಲಿ (ಎನ್‌ಯುಎಸ್) ಸೌತ್ ಏಷ್ಯನ್ ಸ್ಟಡೀಸ್ ಸಂಸ್ಥೆ (ಐಎಸ್‌ಎಎಸ್) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಹವಾಮಾನ ಬದಲಾವಣೆಯಿಂದ ಉಂಟಾಗುವ  ಅಪಾಯಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು, ಇತ್ತೀಚಿನ ಪ್ರಾಕೃತಿಕ ದುರಂತಗಳ ಬಗ್ಗೆ ಮಾತನಾಡಿದ ಅವರು ಸುಸ್ಥಿರ ಬೆಳವಣಿಗೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಪಾರದರ್ಶಕತೆ ಮತ್ತು ಪರಿಸರ ಸಾಮರ್ಥ್ಯ ನಿರ್ಮಾಣದ ಪ್ರಾಮುಖ್ಯತೆಯನ್ನು ಹೇಳಿದರು. 2024 ರಲ್ಲಿ ದಾಖಲೆಯ ತಾಪಮಾನ ಹಾಗೂ ಆ ಬಳಿಕದ ಹವಾಮಾನ, ಕೃಷಿ ಮತ್ತು ಪ್ರಾಕೃತಿಕ ಬದಲಾವಣೆಗಳ ಬಗ್ಗೆ ವಿಶ್ಲೇಷಿಸಿದ ಅವರು ಇಂತಹ ಹವಾಮಾನ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಹೀಗಾಗಿ ಆರ್ಥಿಕತೆ ಮತ್ತು ಹಣಕಾಸು ವಲಯವು ಹವಾಮಾನದ ಮೇಲೂ ಹೊಂದಿಕೊಂಡಿದೆ, ಈ ಪರಸ್ಪರ ಹೊಂದಾಣಿಕೆಯ ಕ್ರಿಯೆಯು ಭವಿಷ್ಯದಲ್ಲಿ ಹಣಕಾಸಿನ ಸ್ಥಿರತೆಯ ಅಪಾಯಗಳಿಗೆ ಕಾರಣವಾಗಬಹುದು. ಈಗಾಗಲೇ ಜಾಗತಿಕ ಆರ್ಥಿಕತೆಯ ಮೇಲೆ ಹವಾಮಾನ ಬದಲಾವಣೆಯ ಗಂಭೀರ ಪರಿಣಾಮ ಬೀರಿದೆ. ಹವಾಮಾನ ಬದಲಾವಣೆಯು ಹಣಕಾಸು ವ್ಯವಸ್ಥೆಗೆ ಪ್ರಮುಖ ಅಪಾಯವಾಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ರಾವ್ ಎಚ್ಚರಿಸಿದರು.

ಹೀಗಾಗಿ ಈಗಲೇ ಈ ಅಪಾಯಗಳ ಸರಿಯಾದ ರೀತಿಯಲ್ಲಿ ಗಮನಿಸಿಕೊಂಡು ಎಲ್ಲಾ ಕ್ಷೇತ್ರವನ್ನೂ ಸರಿಪಡಿಸಿಕೊಂಡು ಸಾಮರ್ಥ್ಯಗಳನ್ನು ಹೆಚ್ಚಿಸುವುದು ಅತ್ಯಗತ್ಯ ,  ಈ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ  ನಮ್ಮ ಮುಂದೆ ದೊಡ್ಡ ಜವಾಬ್ದಾರಿ ಇದೆ. ಭವಿಷ್ಯದ ಪೀಳಿಗೆಗೆ ಸುಸ್ಥಿರ ಬೆಳವಣಿಗೆ ಮತ್ತು ಪರಿಸರಕ್ಕಾಗಿ ನಾವು ಒಂದಾಗಿ ನಿರ್ಣಾಯಕ ಮಾರ್ಗಸೂಚಿಯನ್ನು ಒದಗಿಸಬೇಕಿದೆ ಎಂದು ಎಂದು ರಾವ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

20 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

20 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago