Advertisement
MIRROR FOCUS

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

Share

ಹವಾಮಾನ ಬದಲಾವಣೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಸಂಬಂಧಿತ ಆರ್ಥಿಕ ಅಪಾಯಗಳನ್ನು ತಗ್ಗಿಸುವ ಬಗ್ಗೆ ತುರ್ತು ಕ್ರಮಗಳ ಅಗತ್ಯ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಹೇಳಿದ್ದಾರೆ.

ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದಲ್ಲಿ (ಎನ್‌ಯುಎಸ್) ಸೌತ್ ಏಷ್ಯನ್ ಸ್ಟಡೀಸ್ ಸಂಸ್ಥೆ (ಐಎಸ್‌ಎಎಸ್) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಹವಾಮಾನ ಬದಲಾವಣೆಯಿಂದ ಉಂಟಾಗುವ  ಅಪಾಯಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು, ಇತ್ತೀಚಿನ ಪ್ರಾಕೃತಿಕ ದುರಂತಗಳ ಬಗ್ಗೆ ಮಾತನಾಡಿದ ಅವರು ಸುಸ್ಥಿರ ಬೆಳವಣಿಗೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಪಾರದರ್ಶಕತೆ ಮತ್ತು ಪರಿಸರ ಸಾಮರ್ಥ್ಯ ನಿರ್ಮಾಣದ ಪ್ರಾಮುಖ್ಯತೆಯನ್ನು ಹೇಳಿದರು. 2024 ರಲ್ಲಿ ದಾಖಲೆಯ ತಾಪಮಾನ ಹಾಗೂ ಆ ಬಳಿಕದ ಹವಾಮಾನ, ಕೃಷಿ ಮತ್ತು ಪ್ರಾಕೃತಿಕ ಬದಲಾವಣೆಗಳ ಬಗ್ಗೆ ವಿಶ್ಲೇಷಿಸಿದ ಅವರು ಇಂತಹ ಹವಾಮಾನ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಹೀಗಾಗಿ ಆರ್ಥಿಕತೆ ಮತ್ತು ಹಣಕಾಸು ವಲಯವು ಹವಾಮಾನದ ಮೇಲೂ ಹೊಂದಿಕೊಂಡಿದೆ, ಈ ಪರಸ್ಪರ ಹೊಂದಾಣಿಕೆಯ ಕ್ರಿಯೆಯು ಭವಿಷ್ಯದಲ್ಲಿ ಹಣಕಾಸಿನ ಸ್ಥಿರತೆಯ ಅಪಾಯಗಳಿಗೆ ಕಾರಣವಾಗಬಹುದು. ಈಗಾಗಲೇ ಜಾಗತಿಕ ಆರ್ಥಿಕತೆಯ ಮೇಲೆ ಹವಾಮಾನ ಬದಲಾವಣೆಯ ಗಂಭೀರ ಪರಿಣಾಮ ಬೀರಿದೆ. ಹವಾಮಾನ ಬದಲಾವಣೆಯು ಹಣಕಾಸು ವ್ಯವಸ್ಥೆಗೆ ಪ್ರಮುಖ ಅಪಾಯವಾಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ರಾವ್ ಎಚ್ಚರಿಸಿದರು.

ಹೀಗಾಗಿ ಈಗಲೇ ಈ ಅಪಾಯಗಳ ಸರಿಯಾದ ರೀತಿಯಲ್ಲಿ ಗಮನಿಸಿಕೊಂಡು ಎಲ್ಲಾ ಕ್ಷೇತ್ರವನ್ನೂ ಸರಿಪಡಿಸಿಕೊಂಡು ಸಾಮರ್ಥ್ಯಗಳನ್ನು ಹೆಚ್ಚಿಸುವುದು ಅತ್ಯಗತ್ಯ ,  ಈ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ  ನಮ್ಮ ಮುಂದೆ ದೊಡ್ಡ ಜವಾಬ್ದಾರಿ ಇದೆ. ಭವಿಷ್ಯದ ಪೀಳಿಗೆಗೆ ಸುಸ್ಥಿರ ಬೆಳವಣಿಗೆ ಮತ್ತು ಪರಿಸರಕ್ಕಾಗಿ ನಾವು ಒಂದಾಗಿ ನಿರ್ಣಾಯಕ ಮಾರ್ಗಸೂಚಿಯನ್ನು ಒದಗಿಸಬೇಕಿದೆ ಎಂದು ಎಂದು ರಾವ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago