Advertisement
MIRROR FOCUS

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

Share

ಹವಾಮಾನ ಬದಲಾವಣೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಸಂಬಂಧಿತ ಆರ್ಥಿಕ ಅಪಾಯಗಳನ್ನು ತಗ್ಗಿಸುವ ಬಗ್ಗೆ ತುರ್ತು ಕ್ರಮಗಳ ಅಗತ್ಯ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಹೇಳಿದ್ದಾರೆ.

ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದಲ್ಲಿ (ಎನ್‌ಯುಎಸ್) ಸೌತ್ ಏಷ್ಯನ್ ಸ್ಟಡೀಸ್ ಸಂಸ್ಥೆ (ಐಎಸ್‌ಎಎಸ್) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಹವಾಮಾನ ಬದಲಾವಣೆಯಿಂದ ಉಂಟಾಗುವ  ಅಪಾಯಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು, ಇತ್ತೀಚಿನ ಪ್ರಾಕೃತಿಕ ದುರಂತಗಳ ಬಗ್ಗೆ ಮಾತನಾಡಿದ ಅವರು ಸುಸ್ಥಿರ ಬೆಳವಣಿಗೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ಪಾರದರ್ಶಕತೆ ಮತ್ತು ಪರಿಸರ ಸಾಮರ್ಥ್ಯ ನಿರ್ಮಾಣದ ಪ್ರಾಮುಖ್ಯತೆಯನ್ನು ಹೇಳಿದರು. 2024 ರಲ್ಲಿ ದಾಖಲೆಯ ತಾಪಮಾನ ಹಾಗೂ ಆ ಬಳಿಕದ ಹವಾಮಾನ, ಕೃಷಿ ಮತ್ತು ಪ್ರಾಕೃತಿಕ ಬದಲಾವಣೆಗಳ ಬಗ್ಗೆ ವಿಶ್ಲೇಷಿಸಿದ ಅವರು ಇಂತಹ ಹವಾಮಾನ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಹೀಗಾಗಿ ಆರ್ಥಿಕತೆ ಮತ್ತು ಹಣಕಾಸು ವಲಯವು ಹವಾಮಾನದ ಮೇಲೂ ಹೊಂದಿಕೊಂಡಿದೆ, ಈ ಪರಸ್ಪರ ಹೊಂದಾಣಿಕೆಯ ಕ್ರಿಯೆಯು ಭವಿಷ್ಯದಲ್ಲಿ ಹಣಕಾಸಿನ ಸ್ಥಿರತೆಯ ಅಪಾಯಗಳಿಗೆ ಕಾರಣವಾಗಬಹುದು. ಈಗಾಗಲೇ ಜಾಗತಿಕ ಆರ್ಥಿಕತೆಯ ಮೇಲೆ ಹವಾಮಾನ ಬದಲಾವಣೆಯ ಗಂಭೀರ ಪರಿಣಾಮ ಬೀರಿದೆ. ಹವಾಮಾನ ಬದಲಾವಣೆಯು ಹಣಕಾಸು ವ್ಯವಸ್ಥೆಗೆ ಪ್ರಮುಖ ಅಪಾಯವಾಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ರಾವ್ ಎಚ್ಚರಿಸಿದರು.

ಹೀಗಾಗಿ ಈಗಲೇ ಈ ಅಪಾಯಗಳ ಸರಿಯಾದ ರೀತಿಯಲ್ಲಿ ಗಮನಿಸಿಕೊಂಡು ಎಲ್ಲಾ ಕ್ಷೇತ್ರವನ್ನೂ ಸರಿಪಡಿಸಿಕೊಂಡು ಸಾಮರ್ಥ್ಯಗಳನ್ನು ಹೆಚ್ಚಿಸುವುದು ಅತ್ಯಗತ್ಯ ,  ಈ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ  ನಮ್ಮ ಮುಂದೆ ದೊಡ್ಡ ಜವಾಬ್ದಾರಿ ಇದೆ. ಭವಿಷ್ಯದ ಪೀಳಿಗೆಗೆ ಸುಸ್ಥಿರ ಬೆಳವಣಿಗೆ ಮತ್ತು ಪರಿಸರಕ್ಕಾಗಿ ನಾವು ಒಂದಾಗಿ ನಿರ್ಣಾಯಕ ಮಾರ್ಗಸೂಚಿಯನ್ನು ಒದಗಿಸಬೇಕಿದೆ ಎಂದು ಎಂದು ರಾವ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

9 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

14 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

15 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

17 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

17 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago