ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಬೆಳಗ್ಗೆಯೇ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು. ಈ ಕಾರಣದಿಂದ ಮಕ್ಕಳು ಬೆಳಿಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಗಾಳಿ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ರಾಜ್ಯದಲ್ಲಿ ಚಳಿಗಾಳಿ ಮುಗಿಯುವ ವರೆಗೆ ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭಿಸಬೇಕು ಎಂದು ಮಕ್ಕಳ ಹಕ್ಕುಹಳ ರಕ್ಷಣಾ ಆಯೋಗ ಇಲಾಖೆಗೆ ಪತ್ರವನ್ನು ಬರೆದಿದೆ. ಪೋಷಕರು ಮತ್ತು ಶಿಕ್ಷಣ ತಜ್ಞರು ಈ ಮನವಿಯನ್ನು ಒಪ್ಪಿಕೊಂಡಿದ್ದು, ಇಲಾಖೆಯು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…