Advertisement
MIRROR FOCUS

ಮುಂದುವರಿದ ಮಳೆ | ವಿಪರೀತ ಬಿಸಿಲು-ವಿಪರೀತ ಮಳೆ | ಈ ಬಾರಿ ಕೃಷಿ ಹಾನಿ ಅಪಾರ

Share

ಹವಾಮಾನ ವೈಪರೀತ್ಯ ಈ ಬಾರಿ ರಾಜ್ಯದ ಕೃಷಿಕರಿಗೆ ಸಮಸ್ಯೆ ತಂದೊಡ್ಡಿದೆ. ಈ ಬಾರಿ ವಿಪರೀತ ತಾಪಮಾನದ ಕಾರಣದಿಂದ ಹಲವು ಬೆಳೆಗಳು ನಾಶವಾದವು. ಇದೀಗ ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ಉಳಿದ ಬೆಳೆಯ ಮೇಲೂ ಪರಿಣಾಮ ಬೀರುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಕೃಷಿಯ ಮೇಲೂ ಈಗಿನ ವಾತಾವರಣ ಪರಿಣಾಮ ಬೀರುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಮೂಡಿಗೆರೆ, ಆಲ್ದೂರು, ಆವತಿ ಭಾಗದ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿ ಕಾಯಿಗಳು ಉದುರಿಹೋಗಿವೆ. ಫಸಲು ಬಿಟ್ಟಿರುವ ಕಾಫಿ ಹಾಗು ಕಾಳು ಮೆಣಸಿನ ಬಳ್ಳಿಗಳಿಗೆ ಮಳೆಯಿಂದ ಹಾನಿ ಉಂಟಾಗುವ ಸಂಭವವಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುಮಾರು 9 ಮಿಲಿ ಮೀಟರ್ ಮಳೆಯಾಗಿದೆ. ಮಳೆಯಿಂದಾಗಿ ರೈತರು ಬೆಳೆ ಹಾನಿ ನಷ್ಟದ ಭೀತಿ ಎದುರಿಸುತ್ತಿದ್ದಾರೆ.

ಹಾವೇರಿಯಲ್ಲಿ ಸುರಿದ ಭಾರೀ ಮಳೆಗೆ ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರ ಹೆಕ್ಟೇರ್ ಜಮೀನಿನಲ್ಲಿದ್ದ ಬೆಳೆ ಹಾನಿಯಾಗಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ  ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ.  ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ  ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.

ನವಲಗುಂದ ತಾಲೂಕಿನಲ್ಲಿ 250 ಹೆಕ್ಟೇರ್ ಪ್ರದೇಶದ ನೆಲಗಡಲೆ , 4500 ಹೆಕ್ಟೇರ್ ಪ್ರದೇಶದ ಗೋವಿನಜೋಳ ಹಾಗೂ 4,200 ಹೆಕ್ಟೇರ್ ಪ್ರದೇಶದ ಹತ್ತಿ ಸೇರಿ ಒಟ್ಟು 8,950 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಮಳೆಯಿಂದ ಹಾನಿಯಾಗಿದೆ.

ನವಲಗುಂದ ತಾಲೂಕಿನಲ್ಲಿ 15 ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಕುಂದಗೋಳ ತಾಲೂಕಿನಲ್ಲಿ 500 ಹೆಕ್ಟೇರ್ ಪ್ರದೇಶದ ಮೆಣಸಿನಕಾಯಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಧಾರವಾಡ ತಾಲೂಕಿನಲ್ಲಿ 20 ಹೆಕ್ಟೇರ್ ವಿವಿಧ ತರಕಾರಿ ಬೆಳೆ ಹಾಗೂ 40 ಹೆಕ್ಟೇರ್ ಹೂವಿನ ಬೆಳೆಯು  ಮಳೆಯಿಂದ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಜೂನ್ ಮತ್ತು ಅಕ್ಟೋಬರ ಎರಡು ತಿಂಗಳಲ್ಲಿ ಒಟ್ಟು 34,303.85 ಹೆಕ್ಟೇರ್ ಪ್ರದೇಶದ ವಿವಿಧ  ಬೆಳೆಗಳು ಮಳೆಯಿಂದ ಹಾನಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಅಡಿಕೆಗೆ ಕೊಳೆರೋಗ ಬಾಧಿಸಿ ಇದೀಗ ಅಡಿಕೆ ಮರಗಳೂ ಸಾಯುವ ಸ್ಥಿತಿಗೆ ಬಂದಿದೆ. ಸುಳಿ ಕೊಳೆರೋಗ ಬಾಧಿಸುತ್ತಿದೆ. ಈ ಬಾರಿ ಬೇಸಗೆಯಲ್ಲಿ ವಿಪರೀತ ತಾಪಮಾನದಿಂದ ಅಡಿಕೆ ಇಳುವರಿ ಮೇಲೂ ಪರಿಣಾಮ ಬೀರಿತ್ತು.ಚಿಕ್ಕಮಗಳೂರು ಸೇರಿದಂತೆ ಮಡಿಕೇರಿ, ಹಾಸನ ಪ್ರದೇಶದಲ್ಲಿ ಏಲಕ್ಕಿ ಬೆಳೆಯ ಮೇಲೂ ಈ ಬಾರಿಯ ಮಳೆ ಪರಿಣಾಮ ಬೀರಿದೆ.

The recent weather extremes have posed a significant challenge for farmers in the state. Many crops have been destroyed due to the extreme temperatures, and the persistent rainfall is now impacting the remaining crops. The current climate conditions are adversely affecting nearly all agricultural activities in the state.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago