Advertisement
MIRROR FOCUS

ಮುಂದುವರಿದ ಮಳೆ | ವಿಪರೀತ ಬಿಸಿಲು-ವಿಪರೀತ ಮಳೆ | ಈ ಬಾರಿ ಕೃಷಿ ಹಾನಿ ಅಪಾರ

Share

ಹವಾಮಾನ ವೈಪರೀತ್ಯ ಈ ಬಾರಿ ರಾಜ್ಯದ ಕೃಷಿಕರಿಗೆ ಸಮಸ್ಯೆ ತಂದೊಡ್ಡಿದೆ. ಈ ಬಾರಿ ವಿಪರೀತ ತಾಪಮಾನದ ಕಾರಣದಿಂದ ಹಲವು ಬೆಳೆಗಳು ನಾಶವಾದವು. ಇದೀಗ ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ಉಳಿದ ಬೆಳೆಯ ಮೇಲೂ ಪರಿಣಾಮ ಬೀರುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಕೃಷಿಯ ಮೇಲೂ ಈಗಿನ ವಾತಾವರಣ ಪರಿಣಾಮ ಬೀರುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಮೂಡಿಗೆರೆ, ಆಲ್ದೂರು, ಆವತಿ ಭಾಗದ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿ ಕಾಯಿಗಳು ಉದುರಿಹೋಗಿವೆ. ಫಸಲು ಬಿಟ್ಟಿರುವ ಕಾಫಿ ಹಾಗು ಕಾಳು ಮೆಣಸಿನ ಬಳ್ಳಿಗಳಿಗೆ ಮಳೆಯಿಂದ ಹಾನಿ ಉಂಟಾಗುವ ಸಂಭವವಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುಮಾರು 9 ಮಿಲಿ ಮೀಟರ್ ಮಳೆಯಾಗಿದೆ. ಮಳೆಯಿಂದಾಗಿ ರೈತರು ಬೆಳೆ ಹಾನಿ ನಷ್ಟದ ಭೀತಿ ಎದುರಿಸುತ್ತಿದ್ದಾರೆ.

ಹಾವೇರಿಯಲ್ಲಿ ಸುರಿದ ಭಾರೀ ಮಳೆಗೆ ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರ ಹೆಕ್ಟೇರ್ ಜಮೀನಿನಲ್ಲಿದ್ದ ಬೆಳೆ ಹಾನಿಯಾಗಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ  ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ.  ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ  ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.

ನವಲಗುಂದ ತಾಲೂಕಿನಲ್ಲಿ 250 ಹೆಕ್ಟೇರ್ ಪ್ರದೇಶದ ನೆಲಗಡಲೆ , 4500 ಹೆಕ್ಟೇರ್ ಪ್ರದೇಶದ ಗೋವಿನಜೋಳ ಹಾಗೂ 4,200 ಹೆಕ್ಟೇರ್ ಪ್ರದೇಶದ ಹತ್ತಿ ಸೇರಿ ಒಟ್ಟು 8,950 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಮಳೆಯಿಂದ ಹಾನಿಯಾಗಿದೆ.

ನವಲಗುಂದ ತಾಲೂಕಿನಲ್ಲಿ 15 ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಕುಂದಗೋಳ ತಾಲೂಕಿನಲ್ಲಿ 500 ಹೆಕ್ಟೇರ್ ಪ್ರದೇಶದ ಮೆಣಸಿನಕಾಯಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಧಾರವಾಡ ತಾಲೂಕಿನಲ್ಲಿ 20 ಹೆಕ್ಟೇರ್ ವಿವಿಧ ತರಕಾರಿ ಬೆಳೆ ಹಾಗೂ 40 ಹೆಕ್ಟೇರ್ ಹೂವಿನ ಬೆಳೆಯು  ಮಳೆಯಿಂದ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಜೂನ್ ಮತ್ತು ಅಕ್ಟೋಬರ ಎರಡು ತಿಂಗಳಲ್ಲಿ ಒಟ್ಟು 34,303.85 ಹೆಕ್ಟೇರ್ ಪ್ರದೇಶದ ವಿವಿಧ  ಬೆಳೆಗಳು ಮಳೆಯಿಂದ ಹಾನಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಅಡಿಕೆಗೆ ಕೊಳೆರೋಗ ಬಾಧಿಸಿ ಇದೀಗ ಅಡಿಕೆ ಮರಗಳೂ ಸಾಯುವ ಸ್ಥಿತಿಗೆ ಬಂದಿದೆ. ಸುಳಿ ಕೊಳೆರೋಗ ಬಾಧಿಸುತ್ತಿದೆ. ಈ ಬಾರಿ ಬೇಸಗೆಯಲ್ಲಿ ವಿಪರೀತ ತಾಪಮಾನದಿಂದ ಅಡಿಕೆ ಇಳುವರಿ ಮೇಲೂ ಪರಿಣಾಮ ಬೀರಿತ್ತು.ಚಿಕ್ಕಮಗಳೂರು ಸೇರಿದಂತೆ ಮಡಿಕೇರಿ, ಹಾಸನ ಪ್ರದೇಶದಲ್ಲಿ ಏಲಕ್ಕಿ ಬೆಳೆಯ ಮೇಲೂ ಈ ಬಾರಿಯ ಮಳೆ ಪರಿಣಾಮ ಬೀರಿದೆ.

The recent weather extremes have posed a significant challenge for farmers in the state. Many crops have been destroyed due to the extreme temperatures, and the persistent rainfall is now impacting the remaining crops. The current climate conditions are adversely affecting nearly all agricultural activities in the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

57 minutes ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 hour ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

18 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

20 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

22 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

23 hours ago