Advertisement
ಪ್ರಮುಖ

ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಒಡಿಸ್ಸಾದಲ್ಲಿ ಹೆಜ್ಜೆ | ಕೃಷಿ ಉತ್ಪನ್ನಗಳ ದಾಸ್ತಾನಿಗೆ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಬಹುದೇ…?

Share

ಒಡಿಸ್ಸಾದಲ್ಲಿ ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಮೂಲಕ ಕೃಷಿ ಉತ್ಪನ್ನಗಳ ಸಂಗ್ರಹದಲ್ಲಿ, ದಾಸ್ತಾನುಗಳಲ್ಲಿ ಕ್ರಾಂತಿಯಾಗಲಿದೆ ಎನ್ನುವ ವಿಶ್ವಾಸವನ್ನು ಅಲ್ಲಿನ ಆಡಳಿತ ಹಾಗೂ ಕೃಷಿ ವಲಯ ಚರ್ಚಿಸುತ್ತಿದೆ.

Advertisement
Advertisement

ಕೆಲವು ಸಮಯಗಳ ಹಿಂದೆ ಒಡಿಸ್ಸಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು, ಇಲ್ಲಿನ ಕೃಷಿ ಭವನಕ್ಕೆ ಭೇಟಿ ನೀಡಿದ ವೇಳೆ ಭಾರತೀಯ ಕಿಸಾನ್‌ ಸಂಘ ಹಾಗೂ ಗ್ರಾಮ ವಿಕಾಸ ಪರಿಷತ್‌ ಮತ್ತು ಇತರ ರೈತ ಸಂಘಟನೆಗಳ ಪ್ರಮುಖರ ಜೊತೆ ಚರ್ಚೆ ಮಾಡಿದಾಗ,  ಕೃಷಿ ಉತ್ಪನ್ನಗಳ ಶೇಖರಣಾ ವ್ಯವಸ್ಥೆಗೆ ಪರಿಸರ ಸ್ನೇಹಿ ಯೋಚನೆಗಳ ಅಗತ್ಯವಿದೆ ಎನ್ನುವ ಚರ್ಚೆ ಬಂದಾಗ, “ಶೇಖರಣಾ ಸೌಲಭ್ಯಗಳನ್ನು ಬಲಪಡಿಸುವ ಮೊದಲ ಹಂತದಲ್ಲಿ, ರಾಜ್ಯದ 58 ಉಪವಿಭಾಗಗಳಲ್ಲಿ  ಕನಿಷ್ಠ ಒಂದು ಶೈತ್ಯಾಗಾರವನ್ನು ನಿರ್ಮಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಉಪ-ವಿಭಾಗ ಮಟ್ಟದಲ್ಲಿ ಇಂತಹ ಸೌಲಭ್ಯಗಳು ರೈತರಿಗೆ ಅವರ ಬೆಳೆ ಕೊಯ್ಲು ನಂತರ ನಷ್ಟವನ್ನು ಕಡಿಮೆ ಮಾಡುವ ಮೂಲಕ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವನ್ನು ಹೆಚ್ಚಿಸುವ ಮೂಲಕ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದರು.

Advertisement

ಇದೀಗ ರಾಜ್ಯದಲ್ಲಿ ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಅಲ್ಲಿನ ಸರ್ಕಾರ ಮುಂದಾಗಿದೆ. ಈ ಬಗ್ಗೆ  ಅಗತ್ಯ ಮಾಹಿತಿಯನ್ನು ಇನ್ಫಿಕೋಲ್ಡ್ ಒದಗಿಸಿದೆ.  ಸೌರಶಕ್ತಿ ಚಾಲಿತ ಕೋಲ್ಡ್ ಸ್ಟೋರೇಜ್ ಸ್ಥಾಪನೆಯಿಂದ ಕೃಷಿ ಉತ್ಪನ್ನಗಳ ಸಂಗ್ರಹದಲ್ಲಿ ಕ್ರಾಂತಿಯಾಗಲಿದೆ. ಇದರಿಂದ ಆಹಾರ ಉತ್ಪನ್ನವು ವ್ಯರ್ಥವಾಗುವುದನ್ನು ಕಡಿಮೆ ಮಾಡಿ ರೈತರ ಆದಾಯವನ್ನೂ ಸುಸ್ಥಿರಗೊಳಿಸಲಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸೌರಶಕ್ತಿ ಚಾಲಿತ ಹಸಿರುಮನೆಗಳನ್ನು ಸ್ಥಾಪಿಸಲಾಗುವುದು ಎಂದು ಒಡಿಸ್ಸಾದ ಕೃಷಿ ಸಚಿವ ಕನಕವರ್ಧನ್ ಸಿಂಗ್‌ದೇವ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಅವರು ಉಲ್ಲೇಖಿಸಿದ್ದಾರೆ. ಸಿಂಗ್ ದೇವು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ಉಪವಿಭಾಗಗಳಲ್ಲಿ ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಹಾಲು ಆಧಾರಿತ ಉತ್ಪನ್ನಗಳ ಸಂರಕ್ಷಣೆಗಾಗಿ ಶೀತಲ ಶೇಖರಣೆಗಳನ್ನು ತೆರೆಯುವ ಕುರಿತು ಚರ್ಚಿಸಲಾಯಿತು.

Advertisement

ಒಡಿಶಾದ ಹವಾಮಾನಕ್ಕೆ ಸೂಕ್ತವಾದ ಕೋಲ್ಡ್ ಸ್ಟೋರೇಜ್‌ಗಳ ಸ್ಥಾಪನೆಯ ವೆಚ್ಚ ಮತ್ತು ಸೇವಾ ಪೂರೈಕೆದಾರರು ಮತ್ತು  ತಜ್ಞರಿಂದ ಹವಾಮಾನ ಪರಿಸ್ಥಿತಿಗಳು ಸೇರಿದಂತೆ ವಿವಿಧ ಅಂಶಗಳ ಕುರಿತು ಮಾಹಿತಿಗಳ ಬಗ್ಗೆ ಚರ್ಚೆ ನಡೆದಿದೆ.

During a meeting at Krushi Bhavan on Monday,‌ Odissa  Minister of Agriculture & Farmers’ Empowerment, Energy, Kanak Vardhan Singh Deo emphasized the importance of setting up climate-friendly and solar powered cold storages in Odisha.

Advertisement

The meeting, presided over by Singh Deo, also focused on the need to open cold storages for the preservation of fruits, vegetables, milk, and milk-based products in all districts and sub-divisions of the State.

The Deputy Chief Minister familiarized himself with the different factors, such as the cost of setting up cold storages that are suitable for Odisha’s climate and weather conditions, from service providers and domain experts. He emphasized the need to establish climate-friendly cold storages in response to climate change. The meeting also discussed the establishment of solar-powered cold storages in line with the Prime Minister’s focus on using renewable and solar energy for sustainable development.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

2 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

4 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

4 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

4 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

5 hours ago