Advertisement
MIRROR FOCUS

ರೈತರ ಬದುಕು ಉಳಿಸಲು ಭಾರತದಲ್ಲಿ ಹವಾಮಾನ–ಸ್ಥಿತಿಸ್ಥಾಪಕ ಕೃಷಿ ಅನಿವಾರ್ಯ

Share

ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ಬರ, ಪ್ರವಾಹ, ಶಾಖ(Heat Wave) ಅಲೆಗಳ ನಡುವೆ ಭಾರತದ ಆಹಾರ ಭದ್ರತೆ, ರೈತರ ಜೀವನೋಪಾಯ ಮತ್ತು ಪರಿಸರ ಸುಸ್ಥಿರತೆಯನ್ನು ಕಾಪಾಡಲು ಹವಾಮಾನ–ಸ್ಥಿತಿಸ್ಥಾಪಕ ಕೃಷಿ (Climate Resilient Agriculture) ಅತ್ಯಗತ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement

ಭಾರತದಲ್ಲಿ ಸುಮಾರು 51 ಶೇಕಡಾ ಕೃಷಿ ಭೂಮಿ ಮಳೆಯಾಶ್ರಿತವಾಗಿದ್ದು, ಹವಾಮಾನ ವೈಪರೀತ್ಯಗಳಿಂದ ಬೆಳೆ ಇಳುವರಿ ಗಂಭೀರವಾಗಿ ಪರಿಣಾಮಕ್ಕೆ ಒಳಗಾಗುತ್ತಿದೆ. ಮುಂದಿನ ದಶಕಗಳಲ್ಲಿ ಮಳೆಯಾಶ್ರಿತ ಭತ್ತ, ಗೋಧಿ ಹಾಗೂ ಮೆಕ್ಕೆಜೋಳದ ಉತ್ಪಾದನೆ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ,ಅಷ್ಟೇ ಅಲ್ಲ, ಅಡಿಕೆ, ರಬ್ಬರ್‌ ಮೇಲೆ ಕೂಡಾ ಪರಿಣಾಮ ಇದೆ ಎಂಬ ಮುನ್ಸೂಚನೆಗಳು ಆತಂಕ ಹೆಚ್ಚಿಸಿವೆ.

ಈ ಹಿನ್ನೆಲೆಯಲ್ಲಿ ಹವಾಮಾನ–ಸಹಿಷ್ಣು ಬೆಳೆ ಪ್ರಭೇದಗಳು, ನೀರಿನ ಸಮರ್ಥ ಬಳಕೆ, ಮಣ್ಣಿನ ಆರೋಗ್ಯ ನಿರ್ವಹಣೆ, ಕೃಷಿ ಅರಣ್ಯ ಪದ್ಧತಿ, ಬೆಳೆ ವೈವಿಧ್ಯೀಕರಣ ಹಾಗೂ ಡಿಜಿಟಲ್ ಕೃಷಿ ತಂತ್ರಜ್ಞಾನಗಳು ಹವಾಮಾನ ಅಪಾಯಗಳನ್ನು ಎದುರಿಸಲು ಪ್ರಮುಖ ಪರಿಹಾರಗಳಾಗಿ ಹೊರಹೊಮ್ಮಿವೆ.

ಕೇಂದ್ರ ಸರ್ಕಾರವು ಹವಾಮಾನ–ಸ್ಥಿತಿಸ್ಥಾಪಕ ಕೃಷಿಯಲ್ಲಿ ರಾಷ್ಟ್ರೀಯ ನಾವೀನ್ಯತೆಗಳು (NICRA), ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್, ಡಿಜಿಟಲ್ ಕೃಷಿ ಮಿಷನ್, ಹಾಗೂ BioE3 ನೀತಿ ಮುಂತಾದ ಉಪಕ್ರಮಗಳ ಮೂಲಕ ಈ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಆದರೆ, ಭಾರತದಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಲ್ಲಿ ತಂತ್ರಜ್ಞಾನದ ಮಾಹಿತಿ ಕಡಿಮೆ, ಮಣ್ಣು–ನೀರಿನ ಒತ್ತಡ ಹಾಗೂ ಮಣ್ಣಿನ ಗುಣಮಟ್ಟ ಸಂರಕ್ಷಣೆಯ ಕಾಳಜಿ, ರಾಷ್ಟ್ರೀಯ ಮಾರ್ಗಸೂಚಿಯ ಕೊರತೆ ಪ್ರಮುಖ ಸವಾಲುಗಳಾಗಿ ಉಳಿದಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಪ್ರಕಾರ, ರಾಷ್ಟ್ರೀಯ ಹವಾಮಾನ–ಸ್ಥಿತಿಸ್ಥಾಪಕ ಕೃಷಿಯ ಮಾರ್ಗಸೂಚಿ, ಜಾಗತಿಕ ಸಹಕಾರ, ಡಿಜಿಟಲ್ ಸಾಕ್ಷರತೆ ವಿಸ್ತರಣೆ ಹಾಗೂ ಮಣ್ಣು–ನೀರಿನ ಪುನಃಸ್ಥಾಪನೆ ಕ್ರಮಗಳನ್ನು ಬಲಪಡಿಸಿದರೆ, ಭಾರತವು ಭವಿಷ್ಯದ ಹವಾಮಾನ ಸವಾಲುಗಳ ನಡುವೆಯೂ ಸುಸ್ಥಿರ ಕೃಷಿ ಮತ್ತು ಆಹಾರ ಭದ್ರತೆಯನ್ನು ಸಾಧಿಸಬಹುದು ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

9 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

17 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

17 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

17 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

17 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago