Advertisement
MIRROR FOCUS

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

Share

ದೇಶದಲ್ಲಿ ಹವಾಮಾನ ಬದಲಾವಣೆಯ ಪರಿಣಾಮವನ್ನು ಎದುರಿಸಲು ಕೃಷಿ ಕ್ಷೇತ್ರವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘National Innovations in Climate Resilient Agriculture (NICRA)’ ಯೋಜನೆ ಮೂಲಕ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

ಈ ಯೋಜನೆಯಡಿ ದೇಶದ 651 ಕೃಷಿ ಪ್ರಧಾನ ಜಿಲ್ಲೆಗಳ ಹವಾಮಾನ ಅಪಾಯ ಮತ್ತು ದುರ್ಬಲತೆ ಮೌಲ್ಯಮಾಪನ ನಡೆಸಲಾಗಿದ್ದು, ಇದರಲ್ಲಿ 310 ಜಿಲ್ಲೆಗಳು ಹವಾಮಾನ ಬದಲಾವಣೆಗೆ ಹೆಚ್ಚು ದುರ್ಬಲವಾಗಿವೆ ಎಂದು ಗುರುತಿಸಲಾಗಿದೆ. ಈ ಪೈಕಿ 109 ಜಿಲ್ಲೆಗಳು ‘ಅತೀ ಹೆಚ್ಚು ದುರ್ಬಲ’ ಹಾಗೂ 201 ಜಿಲ್ಲೆಗಳು ‘ಹೆಚ್ಚು ದುರ್ಬಲ’ ವರ್ಗಕ್ಕೆ ಸೇರಿವೆ.

ಸ್ಥಳಾನುಸಾರ ಕೃಷಿ ಯೋಜನೆ : ಪ್ರತಿ ಜಿಲ್ಲೆಯಿಗಾಗಿ District Agriculture Contingency Plans (DACPs) ರೂಪಿಸಲಾಗಿದ್ದು, ಮಳೆ ವ್ಯತ್ಯಾಸ, ಬರ ಅಥವಾ ನೆರೆ ಪರಿಸ್ಥಿತಿಗಳಿಗೆ ತಕ್ಕಂತೆ ಬೆಳೆ ಆಯ್ಕೆ ಮತ್ತು ಕೃಷಿ ನಿರ್ವಹಣಾ ವಿಧಾನಗಳನ್ನು ರಾಜ್ಯ ಕೃಷಿ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಮಾದರಿ ಹವಾಮಾನ ಸಹನಶೀಲ ಗ್ರಾಮಗಳು : ಹವಾಮಾನ ವ್ಯತ್ಯಾಸಕ್ಕೆ ರೈತರ ಹೊಂದಾಣಿಕೆ ಸಾಮರ್ಥ್ಯ ಹೆಚ್ಚಿಸಲು, 151 ದುರ್ಬಲ ಜಿಲ್ಲೆಗಳಲ್ಲಿನ 448 ಗ್ರಾಮಗಳನ್ನು “Climate Resilient Villages” ಆಗಿ ಅಭಿವೃದ್ಧಿಪಡಿಸಲಾಗಿದೆ. ಈ ಗ್ರಾಮಗಳಲ್ಲಿ ಬರ-ನೆರೆ ಸಹನಶೀಲ ಅಕ್ಕಿ, ಗೋಧಿ, ಸೋಯಾಬೀನ್‌, ಸಾಸಿವೆ ಸೇರಿದಂತೆ ಹಲವು ಬೆಳೆ ತಳಿಗಳ ಪ್ರದರ್ಶನ ನಡೆಸಲಾಗಿದೆ.

ಕೃಷಿಯಲ್ಲಿ AI ಮತ್ತು ಡಿಜಿಟಲ್ ಸೇವೆಗಳು : ರೈತರಿಗೆ ತ್ವರಿತ ಮಾಹಿತಿ ನೀಡಲು ಸರ್ಕಾರ ಹಲವು ಡಿಜಿಟಲ್ ಉಪಕ್ರಮಗಳನ್ನು ಕೈಗೊಂಡಿದೆ. AI ಆಧಾರಿತ “Kisane-Mitra” ಚಾಟ್‌ಬಾಟ್‌ – ದಿನಕ್ಕೆ 20 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರ, “Bharat VISTAAR” ಪ್ಲಾಟ್‌ಫಾರ್ಮ್‌ – ಹವಾಮಾನ, ಮಾರುಕಟ್ಟೆ ದರ, ಯೋಜನೆ ಮಾಹಿತಿ ಒಂದೇ ವೇದಿಕೆಯಲ್ಲಿ, National Pest Surveillance System – ಕೀಟ ಹಾನಿ ಮುಂಚಿತ ಪತ್ತೆ, KISAN SARATHI – ಬೆಳೆ ಆಯ್ಕೆ ಮತ್ತು ಉತ್ಪಾದನೆ ಸಲಹೆ (2.75 ಕೋಟಿ ರೈತರು ನೋಂದಣಿ)

ರೈತರಿಗೆ ತರಬೇತಿ ಮತ್ತು ಹೊಸ ತಳಿಗಳು : ಕೃಷಿ ವಿಜ್ಞಾನ ಕೇಂದ್ರಗಳ (KVKs) ಮೂಲಕ 18.56 ಲಕ್ಷ ರೈತರಿಗೆ ತರಬೇತಿ ನೀಡಲಾಗಿದೆ. ಕಳೆದ 10 ವರ್ಷಗಳಲ್ಲಿ ICAR ಸುಮಾರು 2900 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ್ದು, 2661 ತಳಿಗಳು ಹವಾಮಾನ ಅಥವಾ ಕೀಟ ಒತ್ತಡಕ್ಕೆ ತಾಳುವ ಸಾಮರ್ಥ್ಯ ಹೊಂದಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India has mapped climate risk in 651 agricultural districts under the NICRA project, identifying 310 districts as highly vulnerable to climate change. The government is promoting climate-resilient farming through model villages, new stress-tolerant crop varieties, AI-based advisory platforms, and large-scale farmer training programmes.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

4 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

14 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

20 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago