Advertisement
The Rural Mirror ವಾರದ ವಿಶೇಷ

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

Share

ರಸ್ತೆಯ ಗುಂಡಿಗಳನ್ನು ಮುಚ್ಚಲು ಕೈಗಾರಿಕಾ ತ್ಯಾಜ್ಯಗಳನ್ನು ಸಂಸ್ಕರಿಸಿ ಅದರ ಮೂಲಕ  ಸಿದ್ಧಪಡಿಸಿದ ಮಿಶ್ರಣವನ್ನು ಅಳವಡಿಕೆ ಮಾಡುವ ತಂತ್ರಜ್ಞಾನವೊಂದು ಈಗ ಬಳಕೆ ಬರುತ್ತಿದೆ. ಇಕೋಫಿಕ್ಸ್‌ ಎನ್ನುವ ಹೆಸರಿನ ಮೂಲಕ ಮಹಾನಗರಗಳಲ್ಲಿ ಈಗಾಗಲೇ ಅಳವಡಿಕೆಯಾಗಿದ್ದು, ಪುತ್ತೂರಿನಂತಹ ಪ್ರದೇಶಗಳಲ್ಲೂ ಈಗ ಪ್ರಯತ್ನ ನಡೆಯುತ್ತಿದೆ. ಗ್ರಾಮೀಣ ಭಾಗದ ರಸ್ತೆಗಳಿಗೂ ಈ ಪ್ರಯತ್ನ ನಡೆಯಬೇಕಿದೆ. ಒಂದು ವೇಳೆ ಯಶಸ್ವಿಯಾದರೆ ಇಂತಹ ಮಹತ್ವದ ತಂತ್ರಜ್ಞಾನವೊಂದು ಗ್ರಾಮೀಣ ಭಾಗಕ್ಕೂ ತಲುಪಲಿದೆ.

ಮಳೆ ನೀರು ರಸ್ತೆಯಲ್ಲಿ ತುಂಬಿದ್ದರೂ ಅದರ ಮೇಲೆಯೇ ರಸ್ತೆ ಗುಂಡಿ ಮುಚ್ಚಲು ಬಳಕೆ ಮಾಡಬಹುದಾದ ಇಕೋಫಿಕ್ಸ್‌ ಎಂಬುದು ಬಳಕೆಗೆ ಸಿದ್ಧವಾಗಿರುವ ರಸ್ತೆ ಗುಂಡಿ ದುರಸ್ತಿ ಮಿಶ್ರಣ.ಇದನ್ನು ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್ (CSIR-CRRI) ಹಾಗೂ ರಾಮುಕಾ ಗ್ಲೋಬಲ್ ಸರ್ವೀಸಸ್ ಎಂಬ ಸ್ಟಾರ್ಟ್ಅಪ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಈಗಾಗಲೇ ಈ ತಂತ್ರಜ್ಞಾನವನ್ನು ದೆಹಲಿ, ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಪ್ರಯೋಗ ಮಾಡಲಾಗಿದೆ. ಇಕೋಫಿಕ್ಸ್ ಮೂಲಕ ದುರಸ್ತಿ ಮಾಡಿದ ತಕ್ಷಣ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬಹುದಾಗಿದೆ.  ಇಕೋಫಿಕ್ಸ್ ಬಳಸಿದ ಸ್ಥಳಗಳ ನಿರ್ವಹಣೆಗೆ ಈ ಸಂಸ್ಥೆಗಳು 2.5 ವರ್ಷಗಳ ಯಾವುದೇ ನಿರ್ವಹಣೆ ಅಗತ್ಯ ಇಲ್ಲ ಎಂದು ಪ್ರಾಯೋಗಿಕ ಪರೀಕ್ಷೆಯ ವೇಳೆ ಸಂಸ್ಥೆಗಳು ಹೇಳಿವೆ.

ಈ ತಂತ್ರಜ್ಞಾನವನ್ನು ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್  ಹಿರಿಯ ಪ್ರಧಾನ ವಿಜ್ಞಾನಿ ಮತ್ತು ವಿಭಾಗದ ಮುಖ್ಯಸ್ಥ ಸತೀಶ್ ಪಾಂಡೆ ಹೆಚ್ಚಿನ ಅಧ್ಯಯನ ಮಾಡಿದ್ದರು. ಸಂಸ್ಕರಿಸಿದ ಕೈಗಾರಿಕಾ ತ್ಯಾಜ್ಯದ ಬಳಕೆ ಇಲ್ಲಿದೆ. ಕೈಗಾರಿಕಾ ತ್ಯಾಜ್ಯಗಳನ್ನು ವಿವಿಧ ಮಾದರಿಯಲ್ಲಿ ಸಂಸ್ಕರಿಸಲಾಗುತ್ತದೆ. ಹೀಗಾಗಿ ಹೆಚ್ಚಿನ ಗುಣಮಟ್ಟವೂ ಇರಲಿದೆ. ಇಕೋಫಿಕ್ಸ್ ಅನ್ನು ರಸ್ತೆ ನೀರು ತುಂಬಿದ ಪರಿಸ್ಥಿತಿಗಳಲ್ಲಿ ಕೂಡಾ ಬಳಕೆ ಮಾಡಲು ಸಾಧ್ಯವಿದೆ. ಸಾಮಾನ್ಯವಾಗಿ ಇದುವರೆಗಿನ ಸಾಂಪ್ರದಾಯಿಕ ವಿಧಾನದಲ್ಲಿ ನೀರು ಅಥವಾ ರಸ್ತೆ ಗುಂಡಿಯನ್ನು ಸ್ವಚ್ಛ ಮಾಡಿ ಆ ಬಳಿಕ ಪ್ರಾರಂಭಿಕ ಕೋಟ್‌ ಹಾಕಿದ ಬಳಿಕವೇ ಡಾಮರು ಎರೆಯಬೇಕಾಗಿತ್ತು. ಆದರೆ ಈ ಇಕೋಫಿಕ್ಸ್‌ ಅಂತಹ ಯಾವುದೇ ವಿಧಾನಗಳ ಅಗತ್ಯ ಇಲ್ಲದೆಯೇ ನೀರು ತುಂಬಿರುವ ರಸ್ತೆಯ ಗುಂಡಿಗೆ ಅಳವಡಿಕೆ ಮಾಡಲು ಸಾಧ್ಯವಾಗುತ್ತಿದೆ. ಇದರಲ್ಲಿ ಕಬ್ಭಿಣ ಮತ್ತು ಉಕ್ಕಿನ ಕೈಗಾರಿಕೆಗಳಿಂದ ಬರುವ ಕೈಗಾರಿಕಾ ತ್ಯಾಜ್ಯಗಳ ಸಂಸ್ಕರಿಸಿದ ಅಂಶಗಳು ವಿಶೇಷವಾಗಿ ಇರುವುದರಿಂದ ರಸ್ತೆಗಳು ಹೆಚ್ಚು ಕಾಲ ಬಾಳ್ವಿಕೆಯೂ ಬರಲಿದೆ.

ಬೆಂಗಳೂರಿನಲ್ಲಿಯೂ ಈ ವಿಧಾನದ ಅಳವಡಿಕೆ ಮಾಡಲಾಗಿದೆ.ಬಿಬಿಎಂಪಿ  ಪೈಲಟ್‌ ಪ್ರಾಜೆಕ್ಟ್‌ ಆಗಿ ನಗರದ ಕೆಲವು ರಸ್ತೆಗಳಿಗೆ ಅಳವಡಿಕೆ ಮಾಡಿದೆ.ಇದೀಗ ಪುತ್ತೂರಿನಂತಹ ಪ್ರದೇಶದಲ್ಲೂ ಅಳವಡಿಕೆಯಾಗಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಬಹಳ ಆಸಕ್ತಿಯಿಂದ ಹೊಸತಂತ್ರಜ್ಞಾನವನ್ನು ಪುತ್ತೂರಿನಂತಹ ಪ್ರದೇಶಕ್ಕೂ ಅಳವಡಿಕೆ ಮಾಡಲು ಉತ್ಸಾಹ ತೋರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಶ: ಮೊದಲ ಬಾರಿಗೆ ಈ ಪ್ರಯೋಗ ನಡೆಯುತ್ತಿದೆ. ಯಶಸ್ವಿಯಾದರೆ ಮಲೆನಾಡು ಭಾಗದ  ರಸ್ತೆಗಳಿಗೆ ಹೆಚ್ಚು ಅನುಕೂಲವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

1 hour ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

5 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

5 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

14 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

15 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago