Advertisement
MIRROR FOCUS

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ | ನೌಗೋನ್ ಪ್ರದೇಶದಲ್ಲಿ  ದಿಢೀರ್  ಪ್ರವಾಹ

Share

ಉತ್ತರಾಖಂಡ ರಾಜ್ಯದ ಉತ್ತರ ಕಾಶಿ ಜಿಲ್ಲೆಯಲ್ಲಿ ಮತ್ತೆ  ಮೇಘಸ್ಫೋಟ ಸಂಭವಿಸಿದೆ. ಈ ಹಿನ್ನಲೆಯಲ್ಲಿ  ನೌಗೋನ್ ಪ್ರದೇಶದಲ್ಲಿ  ದೀಡೀರ್  ಪ್ರವಾಹ ಉಂಟಾಗಿದ್ದು, ಪರ್ವತ ಪ್ರಾಂತ್ಯದಿಂದ  ಭಾರಿ ಪ್ರಮಾಣದಲ್ಲಿ ಕೆಸರು ಮಿಶ್ರಿತ  ನೀರು  ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಇದರಿಂದಾಗಿ   ಉತ್ತರ ಕಾಶಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,  ನೌಗೋನ್ ನ ಮಾರುಕಟ್ಟೆ ಹಾಗೂ   ಹಲವಾರು ಮನೆಗಳು ನೀರಿನಲ್ಲಿ ಮುಳುಗಿವೆ. ಪ್ರವಾಹದ ನೀರಿನಲ್ಲಿ  ರಸ್ತೆ , ಸೇತುವೆಗಳು  ಕೊಚ್ಚಿ ಹೋಗಿದ್ದು, ರಸ್ತೆಯಲ್ಲಿ  ನಿಲ್ಲಿಸಲಾಗಿದ್ದ  ವಾಹನಗಳು  ಸಹ  ಪ್ರವಾಹದಲ್ಲಿ  ತೇಲಿ ಹೋಗಿವೆ.

Advertisement
Advertisement

ಉತ್ತರಾಖಂಡ  ಮುಖ್ಯಮಂತ್ರಿ ಪುಷ್ಕರ್  ಸಿಂಗ್  ಧಾಮಿ ಅವರು ಜಿಲ್ಲಾಡಳಿತದೊಂದಿಗೆ  ಮಾತುಕತೆ  ನಡೆಸಿದ್ದು,  ತುರ್ತು ಪರಿಹಾರ ಕಾರ್ಯಗಳನ್ನು  ಕೈಗೊಳ್ಳುವಂತೆ  ಸೂಚಿಸಿದ್ದಾರೆ. ಎಸ್ ಡಿ ಆರ್ ಎಫ್  ಮತ್ತು  ಎನ್ ಡಿ ಆರ್ ಎಫ್  ತಂಡಗಳು  ಸ್ಥಳಕ್ಕೆ ಧಾವಿಸಿದ್ದು,  ನೆರೆ  ಸಂತ್ರಸ್ಥರ  ರಕ್ಷಣಾ ಕಾರ್ಯಾಚರಣೆಯಲ್ಲಿ  ತೊಡಗಿಕೊಂಡಿವೆ. ಅಗತ್ಯವಾದಲ್ಲಿ  ಸೇನಾ ಪಡೆಯನ್ನು ಬಳಕೆ ಮಾಡಿಕೊಳ್ಳುವುದಾಗಿಯೂ  ಜಿಲ್ಲಾಡಳಿತ  ತಿಳಿಸಿದೆ. ಇದೇ ವೇಳೆ  ಅತಿವೃಷ್ಟಿಯಿಂದಾಗಿ  ಯಮುನಾ  ನದಿಯಲ್ಲೂ  ನೀರಿನ ಮಟ್ಟ  ತೀವ್ರಗತಿಯಲ್ಲಿ ಏರಿಕೆಯಾಗಿದ್ದು, ದೆಹಲಿ ಸಮೀಪದಲ್ಲಿ   ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳಿಗೆ  ನೀರು ನುಗ್ಗಿದ್ದು, ಜನರನ್ನು ಸುರಕ್ಷಿತಾ ಸ್ಥಳಗಳಿಗೆ  ಸ್ಥಳಾಂತರಿಸಲು   ದೆಹಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಪಂಜಾಬ್ ನಲ್ಲೂ   ಸಹ ಅತಿವೃಷ್ಟಿಯಿಂದಾಗಿ   ಜನಜೀವನ ತೊಂದರೆಗೊಳಗಾಗಿದೆ. ಕಳೆದ  24 ಗಂಟೆಗಳಲ್ಲಿ ಅಮೃತಸರ ಮತ್ತು ರೂಪಾ ನಗರಗಳಲ್ಲಿ ಮತ್ತೆ ಮೂವರು  ಅತಿವೃಷ್ಟಿಗೆ ಬಲಿಯಾಗಿದ್ದಾರೆ. ಇದರಿಂದ  ಪಂಜಾಬ್ ನ 14 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ   ಮೃತಪಟ್ಟವರ ಸಂಖ್ಯೆ  46 ಕ್ಕೆ ಏರಿಕೆಯಾಗಿದೆ. ಪಂಜಾಬ್ ನ 1996 ಕ್ಕೂ ಹೆಚ್ಚು ಗ್ರಾಮಗಳು  ಅತಿವೃಷ್ಟಿಯಿಂದಾಗಿ  ಹಾನಿಗೊಳಲಾಗಿದೆ. 13 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚಿನ  ಹಾನಿಯಾಗಿದೆ ಎಂದು  ಪಂಜಾಬ್ ಸರ್ಕಾರ ಅಂದಾಜಿಸಿದೆ. ಎನ್ ಡಿಆರ್ ಎಫ್, ಬಿಎಸ್ ಎಫ್, ಭಾರತೀಯ  ಸೇನೆಯು ರಕ್ಷಣಾ ಕಾರ್ಯಾಚರಣೆಗಳನ್ನು ಮುಂದುವರೆಸಿದೆ. ಸುಮಾರು  23 ಸಾವಿರ  ಸಂತ್ರಸ್ಥರನ್ನು ಸುರಕ್ಷಿತಾ ಪ್ರದೇಶಗಳಿಗೆ  ಸ್ಥಳಾಂತರಿಸಲಾಗಿದೆ. ಗುರುದಾಸ್ ಪುರ, ಅಮೃತಸರ, ಕಪುರ್ತಲಾ , ತರನ್-ತರಣ್  ಜಿಲ್ಲೆಗಳಲ್ಲಿ ಅತಿಹೆಚ್ಚು ಹಾನಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

1 hour ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

6 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

6 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

16 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

16 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

16 hours ago