#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

August 14, 2023
4:57 PM
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್‌ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?

ಕೆಲ ದಿನಗಳ ಹಿಂದಷ್ಟೇ ಹಿಮಾಚಲ ಪ್ರದೇಶ ಸೇರಿದಂತೆ ಆಸುಪಾಸಿನ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಅದರಲ್ಲೂ ಹಿಮಾಚಲ ಹಾಗೂ ಗುಡ್ಡಗಾಡು ಪ್ರದೇಶದಲಿ ಮೇಘಸ್ಫೋಟ ಸಂಭವಿಸಿತ್ತು. ಈ ಘಟನೆಯಿಂದ ಸುಮಾರು 100 ಕ್ಕೂ ಹೆಚ್ಚು ಭಾರೀ ಮಳೆಗೆ ಬಲಿಯಾಗಿದ್ದರು. ಇದೀಗ ಮತ್ತೆ ಮೇಘಸ್ಫೋಟ, ಭಾರೀ ಮಳೆಯಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಬಲಿಯಾಗಿದ್ದಾರೆ. ಹಿಮಾಚಲ ಹಾಗೂ ಆಸುಪಾಸಿನ ರಾಜ್ಯಗಳ ಗುಡ್ಡಗಾಡು ಪ್ರದೇಶಗಳಲ್ಲಿಯೇ ಏಕೆ ಮೇಘಸ್ಫೋಟ, ಭಾರೀ ಮಳೆಯಾಗುತ್ತದೆ…?

Advertisement

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಗುಡ್ಡಗಾಡು ರಾಜ್ಯಗಳು ಭಾರೀ ಮಳೆಯ ತೀವ್ರತೆಗೆ ಸಾಕ್ಷಿಯಾಗುತ್ತಿವೆ. ಧಾರಾಕಾರ ಮಳೆಯು ಪ್ರವಾಹ ಮತ್ತು ಭೂಕುಸಿತಗಳನ್ನು ಉಂಟುಮಾಡುತ್ತಿದೆ, ಅಪಾರ ಹಾನಿಯನ್ನುಂಟುಮಾಡುತ್ತದೆ. ಸರ್ಕಾರ, ಇಲಾಖೆಗಳು ಎಷ್ಟು ಎಚ್ಚರಿಕೆ ವಹಿಸಿದರೂ ಪ್ರಕೃತಿಯ ಈ ಮುನಿಸಿಗೆ ಯಾವ ಮುಂಜಾಗ್ರತಾ ಕ್ರಮಗಳೂ ಸಾಕಾಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಈ ರಾಜ್ಯಗಳಲ್ಲಿ ವಾಹನಗಳು ಕೊಚ್ಚಿಹೋಗಿವೆ, ಕಟ್ಟಡಗಳನ್ನು ನೆಲಸಮಗೊಳ್ಳುತ್ತಿವೆ, ಸೇತುವೆಗಳು ನಾಶವಾಗಿವೆ. ಶಿಮ್ಲಾದಲ್ಲಿ  ದೇವಾಲಯದ ಕುಸಿತ ಸಂಭವಿಸಿದೆ.  ಕಳೆದ 24 ಗಂಟೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ.

Advertisement

ಒಂದು ಗಂಟೆಯೊಳಗೆ 10 ಚದರ ಕಿಲೋಮೀಟರ್‌ಗಳಲ್ಲಿ 10 ಸೆಂಟಿಮೀಟರ್‌ಗಿಂತ ಹೆಚ್ಚು ಮಳೆಯು ಸಂಭವಿಸಿದಾಗ ಮೇಘಸ್ಫೋಟಗಳು ಸಂಭವಿಸುತ್ತವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಕೇಂದ್ರೀಕೃತವಾಗಿರುವ ಮಳೆಯ ಮೋಡಗಳು ಸಾಧಾರಣವಾಗಿ ಬೆಟ್ಟಗಳ ನಡುವೆ ಸಿಲುಕಿಕೊಂಡು ಮಳೆಯ ಚಟುವಟಿಕೆ ನಡೆದಾಗ ಭಾರೀ ಮಳೆಗೆ ಕಾರಣವಾಗುತ್ತದೆ. ದೇಶದ ಎಲ್ಲಾ ಕಡೆಯೂ ಮುಂಗಾರು ಕಡಿಮೆಯಾದರೂ ಹಿಮಾಚಲ, ಉತ್ತರಾಖಂಡದ ಈ ಪ್ರದೇಶಗಳಲ್ಲಿ ಮಳೆ ಇರುತ್ತದೆ. ಇದಕ್ಕೆ ಕಾರಣ ಭಾರೀ ಬೆಟ್ಟಗಳು. ಭಾರೀ ಮಳೆಯಾದ ತಕ್ಷಣವೇ ಇಲ್ಲಿನ ಮಣ್ಣು ಸಡಿಲಗೊಂಡು ಗುಡ್ಡ ಕುಸಿತ ಸಂಭವಿಸುತ್ತದೆ.ಈಗಲೂ ಅದೇ ಸಂಭವಿಸುತ್ತಿದೆ.

Advertisement

(Source: Agencies)

 

Advertisement
Photo : AFP
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror