MIRROR FOCUS

#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಲ ದಿನಗಳ ಹಿಂದಷ್ಟೇ ಹಿಮಾಚಲ ಪ್ರದೇಶ ಸೇರಿದಂತೆ ಆಸುಪಾಸಿನ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಅದರಲ್ಲೂ ಹಿಮಾಚಲ ಹಾಗೂ ಗುಡ್ಡಗಾಡು ಪ್ರದೇಶದಲಿ ಮೇಘಸ್ಫೋಟ ಸಂಭವಿಸಿತ್ತು. ಈ ಘಟನೆಯಿಂದ ಸುಮಾರು 100 ಕ್ಕೂ ಹೆಚ್ಚು ಭಾರೀ ಮಳೆಗೆ ಬಲಿಯಾಗಿದ್ದರು. ಇದೀಗ ಮತ್ತೆ ಮೇಘಸ್ಫೋಟ, ಭಾರೀ ಮಳೆಯಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಬಲಿಯಾಗಿದ್ದಾರೆ. ಹಿಮಾಚಲ ಹಾಗೂ ಆಸುಪಾಸಿನ ರಾಜ್ಯಗಳ ಗುಡ್ಡಗಾಡು ಪ್ರದೇಶಗಳಲ್ಲಿಯೇ ಏಕೆ ಮೇಘಸ್ಫೋಟ, ಭಾರೀ ಮಳೆಯಾಗುತ್ತದೆ…?

Advertisement

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಗುಡ್ಡಗಾಡು ರಾಜ್ಯಗಳು ಭಾರೀ ಮಳೆಯ ತೀವ್ರತೆಗೆ ಸಾಕ್ಷಿಯಾಗುತ್ತಿವೆ. ಧಾರಾಕಾರ ಮಳೆಯು ಪ್ರವಾಹ ಮತ್ತು ಭೂಕುಸಿತಗಳನ್ನು ಉಂಟುಮಾಡುತ್ತಿದೆ, ಅಪಾರ ಹಾನಿಯನ್ನುಂಟುಮಾಡುತ್ತದೆ. ಸರ್ಕಾರ, ಇಲಾಖೆಗಳು ಎಷ್ಟು ಎಚ್ಚರಿಕೆ ವಹಿಸಿದರೂ ಪ್ರಕೃತಿಯ ಈ ಮುನಿಸಿಗೆ ಯಾವ ಮುಂಜಾಗ್ರತಾ ಕ್ರಮಗಳೂ ಸಾಕಾಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಈ ರಾಜ್ಯಗಳಲ್ಲಿ ವಾಹನಗಳು ಕೊಚ್ಚಿಹೋಗಿವೆ, ಕಟ್ಟಡಗಳನ್ನು ನೆಲಸಮಗೊಳ್ಳುತ್ತಿವೆ, ಸೇತುವೆಗಳು ನಾಶವಾಗಿವೆ. ಶಿಮ್ಲಾದಲ್ಲಿ  ದೇವಾಲಯದ ಕುಸಿತ ಸಂಭವಿಸಿದೆ.  ಕಳೆದ 24 ಗಂಟೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ.

ಒಂದು ಗಂಟೆಯೊಳಗೆ 10 ಚದರ ಕಿಲೋಮೀಟರ್‌ಗಳಲ್ಲಿ 10 ಸೆಂಟಿಮೀಟರ್‌ಗಿಂತ ಹೆಚ್ಚು ಮಳೆಯು ಸಂಭವಿಸಿದಾಗ ಮೇಘಸ್ಫೋಟಗಳು ಸಂಭವಿಸುತ್ತವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಕೇಂದ್ರೀಕೃತವಾಗಿರುವ ಮಳೆಯ ಮೋಡಗಳು ಸಾಧಾರಣವಾಗಿ ಬೆಟ್ಟಗಳ ನಡುವೆ ಸಿಲುಕಿಕೊಂಡು ಮಳೆಯ ಚಟುವಟಿಕೆ ನಡೆದಾಗ ಭಾರೀ ಮಳೆಗೆ ಕಾರಣವಾಗುತ್ತದೆ. ದೇಶದ ಎಲ್ಲಾ ಕಡೆಯೂ ಮುಂಗಾರು ಕಡಿಮೆಯಾದರೂ ಹಿಮಾಚಲ, ಉತ್ತರಾಖಂಡದ ಈ ಪ್ರದೇಶಗಳಲ್ಲಿ ಮಳೆ ಇರುತ್ತದೆ. ಇದಕ್ಕೆ ಕಾರಣ ಭಾರೀ ಬೆಟ್ಟಗಳು. ಭಾರೀ ಮಳೆಯಾದ ತಕ್ಷಣವೇ ಇಲ್ಲಿನ ಮಣ್ಣು ಸಡಿಲಗೊಂಡು ಗುಡ್ಡ ಕುಸಿತ ಸಂಭವಿಸುತ್ತದೆ.ಈಗಲೂ ಅದೇ ಸಂಭವಿಸುತ್ತಿದೆ.

(Source: Agencies)

 

Photo : AFP
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

6 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

13 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

20 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago