Advertisement
MIRROR FOCUS

#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

Share

ಕೆಲ ದಿನಗಳ ಹಿಂದಷ್ಟೇ ಹಿಮಾಚಲ ಪ್ರದೇಶ ಸೇರಿದಂತೆ ಆಸುಪಾಸಿನ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಅದರಲ್ಲೂ ಹಿಮಾಚಲ ಹಾಗೂ ಗುಡ್ಡಗಾಡು ಪ್ರದೇಶದಲಿ ಮೇಘಸ್ಫೋಟ ಸಂಭವಿಸಿತ್ತು. ಈ ಘಟನೆಯಿಂದ ಸುಮಾರು 100 ಕ್ಕೂ ಹೆಚ್ಚು ಭಾರೀ ಮಳೆಗೆ ಬಲಿಯಾಗಿದ್ದರು. ಇದೀಗ ಮತ್ತೆ ಮೇಘಸ್ಫೋಟ, ಭಾರೀ ಮಳೆಯಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಬಲಿಯಾಗಿದ್ದಾರೆ. ಹಿಮಾಚಲ ಹಾಗೂ ಆಸುಪಾಸಿನ ರಾಜ್ಯಗಳ ಗುಡ್ಡಗಾಡು ಪ್ರದೇಶಗಳಲ್ಲಿಯೇ ಏಕೆ ಮೇಘಸ್ಫೋಟ, ಭಾರೀ ಮಳೆಯಾಗುತ್ತದೆ…?

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಗುಡ್ಡಗಾಡು ರಾಜ್ಯಗಳು ಭಾರೀ ಮಳೆಯ ತೀವ್ರತೆಗೆ ಸಾಕ್ಷಿಯಾಗುತ್ತಿವೆ. ಧಾರಾಕಾರ ಮಳೆಯು ಪ್ರವಾಹ ಮತ್ತು ಭೂಕುಸಿತಗಳನ್ನು ಉಂಟುಮಾಡುತ್ತಿದೆ, ಅಪಾರ ಹಾನಿಯನ್ನುಂಟುಮಾಡುತ್ತದೆ. ಸರ್ಕಾರ, ಇಲಾಖೆಗಳು ಎಷ್ಟು ಎಚ್ಚರಿಕೆ ವಹಿಸಿದರೂ ಪ್ರಕೃತಿಯ ಈ ಮುನಿಸಿಗೆ ಯಾವ ಮುಂಜಾಗ್ರತಾ ಕ್ರಮಗಳೂ ಸಾಕಾಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಈ ರಾಜ್ಯಗಳಲ್ಲಿ ವಾಹನಗಳು ಕೊಚ್ಚಿಹೋಗಿವೆ, ಕಟ್ಟಡಗಳನ್ನು ನೆಲಸಮಗೊಳ್ಳುತ್ತಿವೆ, ಸೇತುವೆಗಳು ನಾಶವಾಗಿವೆ. ಶಿಮ್ಲಾದಲ್ಲಿ  ದೇವಾಲಯದ ಕುಸಿತ ಸಂಭವಿಸಿದೆ.  ಕಳೆದ 24 ಗಂಟೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ.

ಒಂದು ಗಂಟೆಯೊಳಗೆ 10 ಚದರ ಕಿಲೋಮೀಟರ್‌ಗಳಲ್ಲಿ 10 ಸೆಂಟಿಮೀಟರ್‌ಗಿಂತ ಹೆಚ್ಚು ಮಳೆಯು ಸಂಭವಿಸಿದಾಗ ಮೇಘಸ್ಫೋಟಗಳು ಸಂಭವಿಸುತ್ತವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಕೇಂದ್ರೀಕೃತವಾಗಿರುವ ಮಳೆಯ ಮೋಡಗಳು ಸಾಧಾರಣವಾಗಿ ಬೆಟ್ಟಗಳ ನಡುವೆ ಸಿಲುಕಿಕೊಂಡು ಮಳೆಯ ಚಟುವಟಿಕೆ ನಡೆದಾಗ ಭಾರೀ ಮಳೆಗೆ ಕಾರಣವಾಗುತ್ತದೆ. ದೇಶದ ಎಲ್ಲಾ ಕಡೆಯೂ ಮುಂಗಾರು ಕಡಿಮೆಯಾದರೂ ಹಿಮಾಚಲ, ಉತ್ತರಾಖಂಡದ ಈ ಪ್ರದೇಶಗಳಲ್ಲಿ ಮಳೆ ಇರುತ್ತದೆ. ಇದಕ್ಕೆ ಕಾರಣ ಭಾರೀ ಬೆಟ್ಟಗಳು. ಭಾರೀ ಮಳೆಯಾದ ತಕ್ಷಣವೇ ಇಲ್ಲಿನ ಮಣ್ಣು ಸಡಿಲಗೊಂಡು ಗುಡ್ಡ ಕುಸಿತ ಸಂಭವಿಸುತ್ತದೆ.ಈಗಲೂ ಅದೇ ಸಂಭವಿಸುತ್ತಿದೆ.

(Source: Agencies)

 

Photo : AFP
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago