#HeavyRain | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಕುಸಿದ ಬೆಟ್ಟಗಳು, ಕೊಚ್ಚಿಹೋದ ಮನೆಗಳು, ನಗರದಲ್ಲೆಲ್ಲಾ ಕೆಸರು… |

July 10, 2023
3:51 PM
ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ದಿಲ್ಲಿಯಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟವಾಗಿದ್ದು ಭಾರೀ ಮಳೆಯಿಂದ ಗುಡ್ಡಗಳು ಭಾರೀ ಸದ್ದಿನೊಂದಿಗೆ ಕುಸಿದಿದೆ. ಈ ಭಯಾನಕ ದೃಶ್ಯ ಜನರನ್ನು ಭಯಭೀತರನ್ನಾಗಿಸಿದೆ.

ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜಲ ಪ್ರಳಯಕ್ಕೆ ಒಟ್ಟು 28 ಮಂದಿ ಬಲಿಯಾಗಿದ್ದಾರೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಿಮಾಚಲ ಪ್ರದೇಶದೊಂದೇ ಕಡೆ 20 ಮಂದಿ ಸಾವನ್ನಪ್ಪಿದ್ದಾರೆ.  ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ದಿಲ್ಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಮುಂದಿನ ಕೆಲ ದಿನಗಳ ಕಾಲ ಈ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಉಕ್ಕಿ ಹರಿದ ನದಿ

ಭಾರೀ ಮಳೆಗೆ ನಗರದಲ್ಲೆಲ್ಲಾ ನೀರು ಹರಿಯುತ್ತಿದೆ. ವಾಹನಗಳು ತೇಲಿ ಹೋಗುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಬಂದಿವೆ. ಬೃಹತ್‌ ಗಾತ್ರದ ಮರಗಳು ಮಣ್ಣುಮಿಶ್ರಿತ ನೀರಿನೊಂದಿಗೆ ತೇಲಿ ಬರುತ್ತಿವೆ. ನಗರದಲ್ಲಿ ಕೆಸರುಮಣ್ಣಿನೊಂದಿಗೆ ಮರಗಳು ಬಂದು ನಿಂತಿವೆ.  ಹಲವು ಜನ ವಸತಿ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ನದಿ ಪಾತ್ರದ ಅಕ್ಕ ಪಕ್ಕದ ನಿವಾಸಿಗಳ ಪರಿಸ್ಥಿತಿಯಂತೂ ಭೀಕರವಾಗಿದೆ.(ವಿಡಿಯೋ ಇದೆ)

ಭಯಾನಕ ದೃಶ್ಯಗಳು…

ಶಿಮ್ಲಾ, ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್‌ನಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ. ಕುಲು-ಮನಾಲಿ ರಸ್ತೆಯಲ್ಲಿ ನದಿಯ ಉಬ್ಬರ ಮತ್ತು ಬಂಡೆಗಳು ಉರುಳಿಬಿದ್ದು ರಸ್ತೆ ಸಂಚಾರಕ್ಕೆ ಅಡೆತಡೆಯುಂಟಾಗಿದೆ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror