ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ದಿಲ್ಲಿಯಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟವಾಗಿದ್ದು ಭಾರೀ ಮಳೆಯಿಂದ ಗುಡ್ಡಗಳು ಭಾರೀ ಸದ್ದಿನೊಂದಿಗೆ ಕುಸಿದಿದೆ. ಈ ಭಯಾನಕ ದೃಶ್ಯ ಜನರನ್ನು ಭಯಭೀತರನ್ನಾಗಿಸಿದೆ.
ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜಲ ಪ್ರಳಯಕ್ಕೆ ಒಟ್ಟು 28 ಮಂದಿ ಬಲಿಯಾಗಿದ್ದಾರೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಿಮಾಚಲ ಪ್ರದೇಶದೊಂದೇ ಕಡೆ 20 ಮಂದಿ ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ದಿಲ್ಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಮುಂದಿನ ಕೆಲ ದಿನಗಳ ಕಾಲ ಈ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆಗೆ ನಗರದಲ್ಲೆಲ್ಲಾ ನೀರು ಹರಿಯುತ್ತಿದೆ. ವಾಹನಗಳು ತೇಲಿ ಹೋಗುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಬಂದಿವೆ. ಬೃಹತ್ ಗಾತ್ರದ ಮರಗಳು ಮಣ್ಣುಮಿಶ್ರಿತ ನೀರಿನೊಂದಿಗೆ ತೇಲಿ ಬರುತ್ತಿವೆ. ನಗರದಲ್ಲಿ ಕೆಸರುಮಣ್ಣಿನೊಂದಿಗೆ ಮರಗಳು ಬಂದು ನಿಂತಿವೆ. ಹಲವು ಜನ ವಸತಿ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ನದಿ ಪಾತ್ರದ ಅಕ್ಕ ಪಕ್ಕದ ನಿವಾಸಿಗಳ ಪರಿಸ್ಥಿತಿಯಂತೂ ಭೀಕರವಾಗಿದೆ.(ವಿಡಿಯೋ ಇದೆ)
ಭಯಾನಕ ದೃಶ್ಯಗಳು…
ಶಿಮ್ಲಾ, ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್ನಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕುಲು-ಮನಾಲಿ ರಸ್ತೆಯಲ್ಲಿ ನದಿಯ ಉಬ್ಬರ ಮತ್ತು ಬಂಡೆಗಳು ಉರುಳಿಬಿದ್ದು ರಸ್ತೆ ಸಂಚಾರಕ್ಕೆ ಅಡೆತಡೆಯುಂಟಾಗಿದೆ
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…