ಹವಾಮಾನ ವರದಿ | 26-12-2024 | ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ | ಜನವರಿಯಲ್ಲಿ ಮಳೆಯ ಸಾಧ್ಯತೆ ಇಲ್ಲ|

December 26, 2024
11:17 AM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

27.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. …..ಮುಂದೆ ಓದಿ….

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು 28 ರಿಂದ ಒಂದೆರಡು ದಿನಗಳ ಕಾಲ ಮೋಡವಿದ್ದರೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 28 ರಿಂದ ಮೋಡ ಹಾಗೂ ಮತ್ತೆರಡು ದಿನಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಡಿಸೆಂಬರ್ 27ರಂದು ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, 28 ರಿಂದ ಕಡಿಮೆಯಾಗಿ ಒಂದೆರಡು ದಿನಗಳ ಕಾಲ ಮೋಡ ಮಾತ್ರ ಇರಬಹುದು. ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group