ವೆದರ್ ಮಿರರ್

ಹವಾಮಾನ ವರದಿ | 26-12-2024 | ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ | ಜನವರಿಯಲ್ಲಿ ಮಳೆಯ ಸಾಧ್ಯತೆ ಇಲ್ಲ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

27.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. …..ಮುಂದೆ ಓದಿ….

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು 28 ರಿಂದ ಒಂದೆರಡು ದಿನಗಳ ಕಾಲ ಮೋಡವಿದ್ದರೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 28 ರಿಂದ ಮೋಡ ಹಾಗೂ ಮತ್ತೆರಡು ದಿನಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಡಿಸೆಂಬರ್ 27ರಂದು ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, 28 ರಿಂದ ಕಡಿಮೆಯಾಗಿ ಒಂದೆರಡು ದಿನಗಳ ಕಾಲ ಮೋಡ ಮಾತ್ರ ಇರಬಹುದು. ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 hour ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

3 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

3 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

3 hours ago