Advertisement
ಸುದ್ದಿಗಳು

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ | ದ ಕ ಜಿಲ್ಲೆಗೆ ಹೆಚ್ಚಿನ ಅನುದಾನ | ಸುಳ್ಯಕ್ಕೆ ದಕ್ಕದ ಸೀಎಂ ಸ್ಪೆಶಲ್‌ ಅನುದಾನ | ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ? |

Share

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277  ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಲಭ್ಯವಾದ ಎರಡನೇ ಜಿಲ್ಲೆ ದ ಕ ಜಿಲ್ಲೆಯಾಗಿದೆ. ಆದರೆ ಈ ಪಟ್ಟಿಯಲ್ಲಿ ಸುಳ್ಯದ ಹೆಸರಿಲ್ಲ ಹಾಗೂ ಸುಳ್ಯದ ಸಚಿವರು ಇರುವುದರಿಂದ ಅನುದಾನಗಳ ವಿಶೇಷ ಪ್ಯಾಕೇಜ್‌ ಲಭ್ಯವಾಗಲಿದೆ ಎಂಬ ಚರ್ಚೆ ಈಗ ಆರಂಭವಾಗಿದೆ.

Advertisement
Advertisement

ಮುಖ್ಯಮಂತ್ರಿಗಳ ಬದಲಾವಣೆ ಸೇರಿದಂತೆ ರಾಜ್ಯದಲ್ಲಿ ರಾಜಕೀಯದ ವಿವಿಧ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ವಿಶೇಷವಾಗಿ ಅನುದಾನಗಳ ಹಂಚಿಕೆ ಮಾಡಿದ್ದಾರೆ. ಈ ಅನುದಾನ ಹಂಚಿಕೆ ಪಟ್ಟಿ ಪ್ರಕಾರ ಅತ್ಯಧಿಕವಾಗಿ ಬೆಳಗಾವಿ ಜಿಲ್ಲೆಗೆ 121  ಕೋಟಿ ರೂಪಾಯಿ ಹಂಚಿಕೆ ಮಾಡಿದ್ದರೆ ಎರಡನೇ ಅಧಿಕ ಜಿಲ್ಲೆಯಾಗಿ ದ ಕ ಜಿಲ್ಲೆಗೆ 95 ಕೋಟಿ ರೂಪಾಯಿ ನೀಡಿದ್ದಾರೆ. ಅದರಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರದ ಹೆಸರು ಕಾಣಿಸುತ್ತಿಲ್ಲ. ಆದರೆ ಸುಳ್ಯದ ಸಚಿವರು ಕ್ಯಾಬಿನೆಟ್‌ ನಲ್ಲಿ ಇರುವುದರಿಂದ ಸುಳ್ಯದ ಬೇಡಿಕೆಗಳ ಪಟ್ಟಿ ಹೆಚ್ಚಿರುವುದರಿಂದ ಮುಂದೆ ವಿಶೇಷ ಪ್ಯಾಕೇಜ್‌ ಘೋಷಣೆಯಾಗಲಿದೆ  ಎಂಬ ಮಾಹಿತಿ ಇದೆ. ಸಚಿವರು ಇರುವ ಪ್ರದೇಶಗಳಿಗೆ ಈ ವಿಶೇಷ ಪ್ಯಾಕೇಜ್‌ ನಲ್ಲಿ ಹೆಚ್ಚಿನ ಅನುದಾನ ನೀಡಿಲ್ಲ ಎಂಬುದು  ಸದ್ಯದ ಮಾಹಿತಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಹಿಂದೆ ಕೂಡಾ ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಯನ್ನು  ಅಂದು ಮುಖ್ಯಮಂತ್ರಿಯಾಗಿದ್ದ ವೇಳೆ ಡಿ ವಿ ಸದಾನಂದ ಗೌಡ ಅವರು ಮಾಡಿದ್ದರು. ಇದೀಗ ಅದೇ ಮಾದರಿಯಲ್ಲಿ  ವಿಶೇಷ ಪ್ಯಾಕೇಜ್‌ ಘೋಷಣೆಯಾಗಲಿದೆ ಎಂಬುದು ಈಗ ಚರ್ಚೆ ಆಗುತ್ತಿರುವ ಸಂಗತಿಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

17 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

18 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

18 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

18 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

18 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

19 hours ago