ಸುದ್ದಿಗಳು

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ | ದ ಕ ಜಿಲ್ಲೆಗೆ ಹೆಚ್ಚಿನ ಅನುದಾನ | ಸುಳ್ಯಕ್ಕೆ ದಕ್ಕದ ಸೀಎಂ ಸ್ಪೆಶಲ್‌ ಅನುದಾನ | ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277  ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಲಭ್ಯವಾದ ಎರಡನೇ ಜಿಲ್ಲೆ ದ ಕ ಜಿಲ್ಲೆಯಾಗಿದೆ. ಆದರೆ ಈ ಪಟ್ಟಿಯಲ್ಲಿ ಸುಳ್ಯದ ಹೆಸರಿಲ್ಲ ಹಾಗೂ ಸುಳ್ಯದ ಸಚಿವರು ಇರುವುದರಿಂದ ಅನುದಾನಗಳ ವಿಶೇಷ ಪ್ಯಾಕೇಜ್‌ ಲಭ್ಯವಾಗಲಿದೆ ಎಂಬ ಚರ್ಚೆ ಈಗ ಆರಂಭವಾಗಿದೆ.

Advertisement

ಮುಖ್ಯಮಂತ್ರಿಗಳ ಬದಲಾವಣೆ ಸೇರಿದಂತೆ ರಾಜ್ಯದಲ್ಲಿ ರಾಜಕೀಯದ ವಿವಿಧ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ವಿಶೇಷವಾಗಿ ಅನುದಾನಗಳ ಹಂಚಿಕೆ ಮಾಡಿದ್ದಾರೆ. ಈ ಅನುದಾನ ಹಂಚಿಕೆ ಪಟ್ಟಿ ಪ್ರಕಾರ ಅತ್ಯಧಿಕವಾಗಿ ಬೆಳಗಾವಿ ಜಿಲ್ಲೆಗೆ 121  ಕೋಟಿ ರೂಪಾಯಿ ಹಂಚಿಕೆ ಮಾಡಿದ್ದರೆ ಎರಡನೇ ಅಧಿಕ ಜಿಲ್ಲೆಯಾಗಿ ದ ಕ ಜಿಲ್ಲೆಗೆ 95 ಕೋಟಿ ರೂಪಾಯಿ ನೀಡಿದ್ದಾರೆ. ಅದರಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರದ ಹೆಸರು ಕಾಣಿಸುತ್ತಿಲ್ಲ. ಆದರೆ ಸುಳ್ಯದ ಸಚಿವರು ಕ್ಯಾಬಿನೆಟ್‌ ನಲ್ಲಿ ಇರುವುದರಿಂದ ಸುಳ್ಯದ ಬೇಡಿಕೆಗಳ ಪಟ್ಟಿ ಹೆಚ್ಚಿರುವುದರಿಂದ ಮುಂದೆ ವಿಶೇಷ ಪ್ಯಾಕೇಜ್‌ ಘೋಷಣೆಯಾಗಲಿದೆ  ಎಂಬ ಮಾಹಿತಿ ಇದೆ. ಸಚಿವರು ಇರುವ ಪ್ರದೇಶಗಳಿಗೆ ಈ ವಿಶೇಷ ಪ್ಯಾಕೇಜ್‌ ನಲ್ಲಿ ಹೆಚ್ಚಿನ ಅನುದಾನ ನೀಡಿಲ್ಲ ಎಂಬುದು  ಸದ್ಯದ ಮಾಹಿತಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಈ ಹಿಂದೆ ಕೂಡಾ ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಯನ್ನು  ಅಂದು ಮುಖ್ಯಮಂತ್ರಿಯಾಗಿದ್ದ ವೇಳೆ ಡಿ ವಿ ಸದಾನಂದ ಗೌಡ ಅವರು ಮಾಡಿದ್ದರು. ಇದೀಗ ಅದೇ ಮಾದರಿಯಲ್ಲಿ  ವಿಶೇಷ ಪ್ಯಾಕೇಜ್‌ ಘೋಷಣೆಯಾಗಲಿದೆ ಎಂಬುದು ಈಗ ಚರ್ಚೆ ಆಗುತ್ತಿರುವ ಸಂಗತಿಯಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

18 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

20 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

24 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

1 day ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

1 day ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

1 day ago