ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಲಭ್ಯವಾದ ಎರಡನೇ ಜಿಲ್ಲೆ ದ ಕ ಜಿಲ್ಲೆಯಾಗಿದೆ. ಆದರೆ ಈ ಪಟ್ಟಿಯಲ್ಲಿ ಸುಳ್ಯದ ಹೆಸರಿಲ್ಲ ಹಾಗೂ ಸುಳ್ಯದ ಸಚಿವರು ಇರುವುದರಿಂದ ಅನುದಾನಗಳ ವಿಶೇಷ ಪ್ಯಾಕೇಜ್ ಲಭ್ಯವಾಗಲಿದೆ ಎಂಬ ಚರ್ಚೆ ಈಗ ಆರಂಭವಾಗಿದೆ.
ಮುಖ್ಯಮಂತ್ರಿಗಳ ಬದಲಾವಣೆ ಸೇರಿದಂತೆ ರಾಜ್ಯದಲ್ಲಿ ರಾಜಕೀಯದ ವಿವಿಧ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಶೇಷವಾಗಿ ಅನುದಾನಗಳ ಹಂಚಿಕೆ ಮಾಡಿದ್ದಾರೆ. ಈ ಅನುದಾನ ಹಂಚಿಕೆ ಪಟ್ಟಿ ಪ್ರಕಾರ ಅತ್ಯಧಿಕವಾಗಿ ಬೆಳಗಾವಿ ಜಿಲ್ಲೆಗೆ 121 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದರೆ ಎರಡನೇ ಅಧಿಕ ಜಿಲ್ಲೆಯಾಗಿ ದ ಕ ಜಿಲ್ಲೆಗೆ 95 ಕೋಟಿ ರೂಪಾಯಿ ನೀಡಿದ್ದಾರೆ. ಅದರಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಹೆಸರು ಕಾಣಿಸುತ್ತಿಲ್ಲ. ಆದರೆ ಸುಳ್ಯದ ಸಚಿವರು ಕ್ಯಾಬಿನೆಟ್ ನಲ್ಲಿ ಇರುವುದರಿಂದ ಸುಳ್ಯದ ಬೇಡಿಕೆಗಳ ಪಟ್ಟಿ ಹೆಚ್ಚಿರುವುದರಿಂದ ಮುಂದೆ ವಿಶೇಷ ಪ್ಯಾಕೇಜ್ ಘೋಷಣೆಯಾಗಲಿದೆ ಎಂಬ ಮಾಹಿತಿ ಇದೆ. ಸಚಿವರು ಇರುವ ಪ್ರದೇಶಗಳಿಗೆ ಈ ವಿಶೇಷ ಪ್ಯಾಕೇಜ್ ನಲ್ಲಿ ಹೆಚ್ಚಿನ ಅನುದಾನ ನೀಡಿಲ್ಲ ಎಂಬುದು ಸದ್ಯದ ಮಾಹಿತಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಪರ್ಕಕ್ಕೆ ಲಭ್ಯವಾಗಿಲ್ಲ.
ಈ ಹಿಂದೆ ಕೂಡಾ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಯನ್ನು ಅಂದು ಮುಖ್ಯಮಂತ್ರಿಯಾಗಿದ್ದ ವೇಳೆ ಡಿ ವಿ ಸದಾನಂದ ಗೌಡ ಅವರು ಮಾಡಿದ್ದರು. ಇದೀಗ ಅದೇ ಮಾದರಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗಲಿದೆ ಎಂಬುದು ಈಗ ಚರ್ಚೆ ಆಗುತ್ತಿರುವ ಸಂಗತಿಯಾಗಿದೆ.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…