ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel