ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.
ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…