ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.
ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…