Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

3 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

23 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

23 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago