ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

January 31, 2026
2:55 PM

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಗರದ ವಿಧಾನಸೌಧದಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹತ್ಮಾಗಾಂಧೀಜಿ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಇಂದು ಸ್ಮರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿಗಳ ಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದ್ದು, ರಾಜ್ಯದ ಸುಮಾರು 6 ಸಾವಿರ ಪಂಚಾಯಿತಿಗಳಿಗೆ ಮಹತ್ಮಾಗಾಂಧೀಜಿ ಹೆಸರು ಇಡಲಾಗುವುದು ಎಂದು ತಿಳಿಸಿದ್ದಾರೆ. ಹಳ್ಳಿಗಳ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ. ಜೊತೆಗೆ ಶಿಕ್ಷಣ ಹಾಗೂ ರಾಜಕೀಯ ಜಾಗೃತಿಯೂ ಅಗತ್ಯವೆಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror