Advertisement
Political mirror

#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

Share

ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.

ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ #Guarantee ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ #manifesto ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

16 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

23 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

23 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

23 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

23 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

23 hours ago