Advertisement
Political mirror

#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

Share

ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.

ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ #Guarantee ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ #manifesto ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

20 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

22 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

23 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

23 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

23 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago