Advertisement
Political mirror

#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

Share

ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.

ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ #Guarantee ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ #manifesto ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

10 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

19 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

24 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago