ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.
ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…