ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.
ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…