ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.
ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…