ಯುವಜನತೆ ಕೃಷಿಗೆ ಬರಬೇಕು, ರೈತರು ಉದ್ಯಮಿಗಳಾಗಬೇಕು: ಸಿಎಂ ಸಿದ್ದರಾಮಯ್ಯ ಕರೆ

February 6, 2026
9:49 PM

ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಹಾಗೂ ರೈತರು ಉತ್ಪಾದನೋತ್ತರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ–2026 ಹಾಗೂ ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಬೆಳೆ ಬೆಳೆಯುವ ಮಟ್ಟಕ್ಕೆ ಸೀಮಿತರಾಗದೆ ಉದ್ಯಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು. ರೈತರು ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿದ್ದು, ಇದರಿಂದ ಕೃಷಿಗೆ ಹೆಚ್ಚುವರಿ ಆದಾಯ ಮತ್ತು ಮೌಲ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ರೈತರಿಗೆ ವಿವಿಧ ರೀತಿಯ ನೆರವು ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ, ಕೃಷಿ ಯಂತ್ರೋಪಕರಣಗಳ ಖರೀದಿಗೆ ₹1,500 ಕೋಟಿ ಸಹಾಯಧನ, ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ, ಈವರೆಗೆ ರೈತರಿಗೆ ₹6,000 ಕೋಟಿ ವಿಮಾ ಪರಿಹಾರ ವಿತರಿಸಲಾಗಿದೆ. ಇದಲ್ಲದೆ, ಕೃಷಿಭಾಗ್ಯ ಯೋಜನೆಯಡಿ ₹200 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಯಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ಉದ್ಯಮಶೀಲತೆ ಸೇರಿಕೊಂಡರೆ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ. ಆದ್ದರಿಂದ ಯುವಜನತೆ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿ, ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಇದನ್ನೂ ಓದಿ…

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror