ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಹಾಗೂ ರೈತರು ಉತ್ಪಾದನೋತ್ತರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ–2026 ಹಾಗೂ ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಬೆಳೆ ಬೆಳೆಯುವ ಮಟ್ಟಕ್ಕೆ ಸೀಮಿತರಾಗದೆ ಉದ್ಯಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು. ರೈತರು ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿದ್ದು, ಇದರಿಂದ ಕೃಷಿಗೆ ಹೆಚ್ಚುವರಿ ಆದಾಯ ಮತ್ತು ಮೌಲ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.
ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ರೈತರಿಗೆ ವಿವಿಧ ರೀತಿಯ ನೆರವು ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ, ಕೃಷಿ ಯಂತ್ರೋಪಕರಣಗಳ ಖರೀದಿಗೆ ₹1,500 ಕೋಟಿ ಸಹಾಯಧನ, ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ, ಈವರೆಗೆ ರೈತರಿಗೆ ₹6,000 ಕೋಟಿ ವಿಮಾ ಪರಿಹಾರ ವಿತರಿಸಲಾಗಿದೆ. ಇದಲ್ಲದೆ, ಕೃಷಿಭಾಗ್ಯ ಯೋಜನೆಯಡಿ ₹200 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕೃಷಿಯಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ಉದ್ಯಮಶೀಲತೆ ಸೇರಿಕೊಂಡರೆ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ. ಆದ್ದರಿಂದ ಯುವಜನತೆ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿ, ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಇದನ್ನೂ ಓದಿ…
ನಿಮ್ಮ ಅಭಿಪ್ರಾಯಗಳಿಗೆ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…